ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕರ ಉಚಿತ ಬಸ್ ವ್ಯವಸ್ಥೆಗೆ ಕೆಎಸ್ಆರ್‌‌ಟಿಸಿಗೆ ಕಾಂಗ್ರೆಸ್‌‌ನಿಂದ ₹1ಕೋಟಿ

Last Updated 3 ಮೇ 2020, 7:32 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ಕಾರ್ಮಿಕರು, ಮಕ್ಕಳು, ಮಹಿಳೆಯರು ಪ್ರಯಾಣಕ್ಕೆ ಹಣವಿಲ್ಲದೆ, ಪರದಾಡುತ್ತಿರುವುದನ್ನು ಮನಗಂಡು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ವತಿಯಿಂದ ₹1ಕೋಟಿ ದೇಣಿಗೆಯನ್ನು ಕೆಎಸ್ಆರ್‌ಟಿಸಿ ಅಧ್ಯಕ್ಷರಿಗೆ ನೀಡಲಾಗಿದೆ.

ಈ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೊರೊನಾ ಕಾಂಗ್ರೆಸ್ ಪರಿಹಾರ ನಿಧಿಗೆ ಪಕ್ಷದ ಶಾಸಕರು, ಜನಪ್ರತಿನಿಧಿಗಳು, ಮಾಜಿ ಶಾಸಕರು ದೇಣಿಗೆಯಾಗಿ ನೀಡಿದ್ದಹಣವನ್ನೂ ಈ ಕೆಲಸಕ್ಕಾಗಿ ಉಪಯೋಗಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ರಾಜಸ್ಥಾನ, ತೆಲಂಗಾಣ, ದೆಹಲಿ, ಉತ್ತರ ಪ್ರದೇಶ, ಮಹಾರಾಷ್ಟ್ರ, ಜಾರ್ಖಂಡ್ ಸೇರಿದಂತೆ ಅನೇಕ ರಾಜ್ಯಗಳ ಪ್ರಯಾಣಿಕರು ತಮ್ಮ ಊರು ತಲುಪಲು ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಿವೆ. ಪ್ರಜೆಗಳ ಬಗ್ಗೆ ಆ ಸರಕಾರಗಳಿಗಿರುವಕಾಳಜಿ ಕರ್ನಾಟಕಕ್ಕೆ ಇಲ್ಲ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT