ಈ ಯೋಜನೆ ಕಾರ್ಯಗತವಾದರೆ ಬಾಳೂರು, ಮೀಯಾರು ಹಾಗೂ ಕಬ್ಬಿನಾಲೆಗಳಲ್ಲಿರುವ ನದಿ– ಝರಿಗಳು ಕಣ್ಮರೆಯಾಗ ಲಿದ್ದು, ಎತ್ತಿನಹೊಳೆ ಹಾಗೂ ನೇತ್ರಾವತಿ ನದಿಗಳೂ ಬತ್ತಿಹೋಗುವ ಅಪಾಯವಿದೆ ಎಂಬ ಆತಂಕ ಕಾಡುತ್ತಿದೆ. ಎನ್ಎಚ್ಎಐ ಸಮಗ್ರ ಯೋಜನಾ ವರದಿಯನ್ನು ಅರಣ್ಯ ಇಲಾಖೆಗೆ ಸಲ್ಲಿಸಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಹಾಸನದ ನಡುವೆ 60.13 ಹೆಕ್ಟೇರ್ ಮೀಸಲು ಅರಣ್ಯವನ್ನು ಅಧಿಸೂಚನೆಯಿಂದ ಕೈಬಿಡುವಂತೆ ಅರಣ್ಯ ಇಲಾಖೆಗೆ ಎನ್ಎಚ್ಎಐ ಮನವಿ ಮಾಡಿದೆ. 2018ರ ಪೂರ್ವಾರ್ಧದಲ್ಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದರೂ, ವಿವರಗಳನ್ನು ಇತ್ತೀಚೆಗೆ ಕಳುಹಿಸಲಾಗಿದೆ ಅದರಂತೆ ದಕ್ಷಿಣ ಕನ್ನಡಜಿಲ್ಲೆಯಲ್ಲಿ ಹೆಚ್ಚು ಅರಣ್ಯ ನಾಶವಾಗಲಿದೆ.