ತುಮಕೂರು: ತುಮಕೂರು, ಗುಬ್ಬಿ ಮತ್ತು ಕುಣಿಗಲ್ ತಾಲ್ಲೂಕಿನ ಜನರನ್ನು ಬೆಚ್ಚಿ ಬೀಳಿಸಿರುವ ನರಹಂತಕ ಚಿರತೆ ಸೆರೆಗೆ ಅರಣ್ಯ ಇಲಾಖೆ ಹೆಬ್ಬೂರು, ಸಿ.ಎಸ್.ಪುರ ಹೋಬಳಿ ಹಾಗೂ ಕುಣಿಗಲ್ ತಾಲ್ಲೂಕಿನ ದೊಡ್ಡಮಳಲವಾಡಿ, ಚಿಕ್ಕಮಳಲವಾಡಿ ಭಾಗದಲ್ಲಿ 20 ಬೋನ್ಗಳನ್ನು ಇಟ್ಟಿದೆ. ಚಲನವಲನಗಳನ್ನು ಗಮನಿಸಲು 36 ಕಡೆಗಳಲ್ಲಿ ಕ್ಯಾಮೆರಾ ಅಳವಡಿಸಲಾಗಿದೆ.