ಪಾಂಡವಪುರ: ತಾಲೂಕಿನ ಕನಗನಮರಡಿ ಗ್ರಾಮದ ಹತ್ತಿರವಿ.ಸಿ ನಾಲೆಗೆ ಶನಿವಾರ ಖಾಸಗಿ ಬಸ್ಉರುಳಿದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 25ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ಘಟನೆಸಂಬಂಧಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಬಿ.ಎಸ್.ಯಡಿಯೂರಪ್ಪ, ಸಂಸದ ಪ್ರಹ್ಲಾದ ಜೋಶಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಹಲವು ನಾಯಕರು ಟ್ವಿಟರ್ನಲ್ಲಿ ಸಂತಾಪ ಸೂಚಿಸಿದ್ದಾರೆ.
ಸದ್ಯ ಕುಮಾರಸ್ವಾಮಿ ಅವರು ಮಂಡ್ಯಕ್ಕೆ ಭೇಟಿ ನೀಡಿದ್ದಾರೆ. ಇದರಹಿನ್ನೆಲೆ ಇಂದು ಸಂಜೆ ನಡೆಯಬೇಕಿದ್ದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದಾರೆ.
ಇದುವರೆಗೆ 25ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಶೋಧಕಾರ್ಯಾಚರಣೆ ಮುಂದುವರಿದಿದೆ.
ಕನಗನಮರಡಿಗೆ ಸಿಎಂ|ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಮುಂದಕ್ಕೆ
— CM of Karnataka (@CMofKarnataka) November 24, 2018
_
ಮುಖ್ಯಮಂತ್ರಿಗಳು ತಮ್ಮ ಇಂದಿನ ಎಲ್ಲ ಕಾರ್ಯಕ್ರಮಗಳನ್ನೂ ರದ್ದುಪಡಿಸಿ ಪಾಂಡವಪುರ- ಕನಗನಮರಡಿ ಗ್ರಾಮದ ಬಸ್ ಅಪಘಾತ ನಡೆದ ಸ್ಥಳಕ್ಕೆ ಧಾವಿಸಲಿದ್ದಾರೆ.ಇಂದು ಸಂಜೆ ನಡೆಯಬೇಕಿದ್ದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ pic.twitter.com/eahedQWKUl
*
I'm sorry to hear about the terrible bus accident in Mandya district of Karnataka in which over 20 people are feared dead & many others injured.
— Rahul Gandhi (@RahulGandhi) November 24, 2018
I extend my deepest condolences to the families of the deceased & pray for the speedy recovery of the injured.
*
Sorry to hear the tragic news of At least 24 passengers, including four kids, who were killed on Saturday afternoon after a bus plunged into a canal in Pandavapur of Mandya district. My deep condolences to their family members, may God give them strength to bear this news.
— Pralhad Joshi (@JoshiPralhad) November 24, 2018
*
ಮಂಡ್ಯ ಜಿಲ್ಲೆಯ ಭೀಕರ ಬಸ್ ದುರಂತ ನನಗೆ ಧಿಗ್ಬ್ರಮೆ ಉಂಟು ಮಾಡಿದೆ . ಜಿಲ್ಲಾಡಳಿತ ತಕ್ಷಣ ಕ್ರಮ ತೆಗೆದುಕೊಂಡು ಗಾಯಾಳುಗಳಿಗೆ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಕೋರಿಕೆ .
— Sadananda Gowda (@DVSBJP) November 24, 2018
*
ಪಾಂಡವಪುರದ ಕನಗನಮರಡಿಯ ಘೋರ ಘಟನೆ ಮನಕಲುಕಿದೆ. ಅದರಲ್ಲೂ, ಬಾಳಿ ಬದುಕಬೇಕಿದ್ದ ಮಕ್ಕಳೂ ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದು ನನ್ನನ್ನು ಅತೀವ ಘಾಸಿಗೊಳಿಸಿದೆ. ಇದು ಕ್ರೂರ ವಿಧಿಯ ಅಟ್ಟಹಾಸವೇ ಸರಿ. ನೋವುಣ್ಣುತ್ತಿರುವ ಸಂತ್ರಸ್ತ ಕುಟುಂಬಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ.
— H D Devegowda (@H_D_Devegowda) November 24, 2018
*
ಪಾಂಡವಪುರ ತಾಲ್ಲೂಕಿನ ಕನಗನಮರಡಿಯಲ್ಲಿ ವಿ.ಸಿ.ನಾಲೆಗೆ ಖಾಸಗೀ ಬಸ್ ಬಿದ್ದು 23ಮಂದಿ ಅಸು ನೀಗಿರುವುದು ದುರ್ದೈವಧ ಸಂಗತಿ.
— B.S. Yeddyurappa (@BSYBJP) November 24, 2018
ಅಮಾಯಕರು ಹೀಗೆ ಅನ್ಯಾಯವಾಗಿ ಸಾವಿಗೀಡಾಗಿರುವುದು ಅತ್ಯಂತ ನೋವುಂಟು ಮಾಡಿದೆ.ಮೃತರ ಕುಟುಂಬಕ್ಕೆ ಸಾಂತ್ವನ ಕೋರುವೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮೃತರ ಕುಟುಂಬಕ್ಕೆ ಅಗತ್ಯವಾದ ನೆರವು ನೀಡಲು ಮುಂದಾಗಬೇಕು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.