ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ಮರಣದ ಪ್ರಮಾಣ ಶೇ 1.5ಕ್ಕೆ ತಲುಪಿದೆ. ಮೃತಪಟ್ಟವರಲ್ಲಿಬಹುತೇಕರು ಹೃದಯ ಕಾಯಿಲೆ, ಮೂತ್ರಪಿಂಡ ಸಮಸ್ಯೆ, ಪಾರ್ಶ್ವವಾಯು, ಬಹು ಅಂಗಾಂಗ ವೈಫಲ್ಯ, ಮಧುಮೇಹ, ರಕ್ತದೊತ್ತಡ ಸೇರಿದಂತೆ ವಿವಿಧ ಅನಾರೋಗ್ಯ ಸಮಸ್ಯೆಗಳನ್ನು ಹೊಂದಿದ್ದರು. ರಾಜ್ಯದಲ್ಲಿ ಈವರೆಗೆ ವರದಿಯಾದ ಕೋವಿಡ್ ಪ್ರಕರಣಗಳಲ್ಲಿ ಶೇ 50 ರಷ್ಟು ಮಂದಿ ಮಧ್ಯ ವಯಸ್ಕರೇ ಆಗಿದ್ದಾರೆ. 20ರಿಂದ 40 ವರ್ಷದೊಳಗಿನ 10 ಸಾವಿರಕ್ಕೂ ಅಧಿಕ ಮಂದಿ ಕೋವಿಡ್ ಪೀಡಿತರಾಗಿ ಆಸ್ಪತ್ರೆಗಳನ್ನು ಸೇರಿದ್ದಾರೆ.