ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಜುಲೈ 26ರಂದು ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಭೇಟಿನೀಡುತ್ತಿರುವ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ದೇವಸ್ಥಾನದೊಳಗೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಲಾಗಿದೆ.
ಅಂದು ನಿರ್ಧಿಷ್ಟ ಸಮಯದಲ್ಲಿ ಸಾರ್ವಜನಿಕರಿಗೆ ದೇವರ ದರ್ಶನ ಮಾಡಲು ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.