ಲಿಂಗಸುಗೂರು ತಾಲ್ಲೂಕಿನ ಯರಗೋಡಿ ಮತ್ತು ಕಡದರದೊಡ್ಡಿ ನಡುಗಡ್ಡೆಯ ಜಮೀನನ್ನು ಆಶ್ರಯಿಸಿದ ಜನರಿಗೆ ಆಹಾರಧಾನ್ಯ ವಿತರಿಸಲಾಯಿತು. ದೇವದುರ್ಗ ಸಮೀಪದ ಹೂವಿನಹೆಡಗಿ ಸೇತುವೆ ಮುಳುಗಲು ಒಂದು ಅಡಿ ಮಾತ್ರ ಬಾಕಿಯಿದ್ದು, ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.ನದಿ ತೀರಕ್ಕೆ ಜನ ಮತ್ತು ಜಾನುವಾರು ಹೋಗದಂತೆ ಸೂಚಿಸಲಾಗಿದೆ. ಪ್ರವಾಹ ಪರಿಸ್ಥಿತಿ ಬಗ್ಗೆ ಜಿಲ್ಲಾಡಳಿತ ನಿಗಾ ವಹಿಸಿದೆ.