ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಕಾಮಗಾರಿ ವೇಳೆ ಮೂವರು ಕಾರ್ಮಿಕರ ಸಾವು

Last Updated 27 ಮೇ 2019, 11:08 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕಿನ ದೇಸೂರು ಗ್ರಾಮದ ಹೊರವಲಯದಲ್ಲಿ ನಡೆಯುತ್ತಿರುವ ಬೆಳಗಾವಿ- ಖಾನಾಪುರ ರಸ್ತೆ ವಿಸ್ತರಣೆ ಕಾಮಗಾರಿ ವೇಳೆ ಮಣ್ಣು ಕುಸಿದ ಪರಿಣಾಮ ಮೂವರು ಕಾರ್ಮಿಕರು ಸಾವಿಗೀಡಾದರು.

ಮೃತರನ್ನು ಜಾರ್ಖಂಡ್ ಮೂಲದವರು ಎನ್ನಲಾದ ಅರ್ಜುನ್ ಸಿಂಗ್ (21), ದುರ್ಗೆಶ್ ಕುಮಾರ (22) ಎಂದು ಗುರುತಿಸಲಾಗಿದೆ. ಇನ್ನೊಬ್ಬರ ವಿವರ ತಿಳಿದುಬಂದಿಲ್ಲ. ಸೇತುವೆ ನಡುವೆ ನಿರ್ಮಾಣಕ್ಕಾಗಿ ಮಣ್ಣು ಅಗೆಯುವ ಕಾಮಗಾರಿ ನಡೆಯುತ್ತಿದ್ದ. ತಗ್ಗಿನಲ್ಲಿ ನಿಂತಿದ್ದ ಅವರ ಮೇಲೆ ಏಕಾಏಕಿ ಮಣ್ಣು ಕುಸಿದಿದೆ ಎಂದು ತಿಳಿದುಬಂದಿದೆ.

ಜೆಸಿಬಿಯಿಂದ ಮಣ್ಣು ತೆಗೆದು ಶವ ಹೊರತೆಗೆಯುವ ಕಾರ್ಯಾಚರಣೆ ನಡೆದಿದೆ.

ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT