‘ರಾಜ್ಯದಲ್ಲಿ ಮಾರ್ಚ್ 21ರೊಳಗೆ 1.20 ಲಕ್ಷ ಮನೆ ನಿರ್ಮಾಣಕ್ಕೆ ಚಾಲನೆ ನೀಡಿ, ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ಬೆಂಗಳೂರು ನಗರದಲ್ಲಿ 1 ಲಕ್ಷ ಮನೆ ಕಟ್ಟಲು 2015–16ರಲ್ಲಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ರೂಪಿಸಿದ್ದ ₹ 6 ಸಾವಿರ ಕೋಟಿಯ ಯೋಜನೆಗೆ ಪ್ರಧಾನಿ ₹ 600 ಕೋಟಿ ಬಿಡುಗಡೆ ಮಾಡಿದ್ದರು. ಬಿಜೆಪಿ ಸರ್ಕಾರ ಬಂದ ಮೇಲೆ 1,110 ಎಕರೆ ಜಮೀನನ್ನು ಹಸ್ತಾಂತರಿಸಲಾಗಿದೆ. ಪ್ರಾಯೋಗಿಕವಾಗಿ 843 ಮನೆಗಳ ನಿರ್ಮಾಣ ಕಾರ್ಯವನ್ನು ಯಲಹಂಕ ವಿಧಾನಸಭಾ ವ್ಯಾಪ್ತಿಯಲ್ಲಿ ಪ್ರಾರಂಭಿಸಲಾಗಿದೆ. ಅದನ್ನು ಹೊರತುಪಡಿಸಿ 2021ರ ಮಾರ್ಚ್ ಒಳಗೆ ಬೆಂಗಳೂರಿನಲ್ಲಿಯೇ 50 ಸಾವಿರ ಮನೆ ನಿರ್ಮಿಸಲಾಗುವುದು’ ಎಂದರು. ‘ವಸತಿ ಯೋಜನೆಯಲ್ಲಿ ಅಕ್ರಮ ನಡೆದಿರುವುದು ಗೊತ್ತಾದ ಬಳಿಕ ವಸತಿ ವಿಜಿಲ್ ರೂಪಿಸಲಾಗಿದ್ದು, ಅಲ್ಲಿ ಪರಿಶೀಲನೆ ನಡೆಸಿದ ಬಳಿಕವೇ ಹಣ ಬಿಡುಗಡೆ ಮಾಡುವ ವ್ಯವಸ್ಥೆಯನ್ನು ರೂಪಿಸಲಾಗಿದೆ. ಅನುದಾನ ಬಿಡುಗಡೆ ವಿಳಂಬವಾಗುವುದನ್ನು ತಪ್ಪಿಸಲು ಇನ್ನು ಮುಂದೆ ಹಣ ಬಿಡುಗಡೆ ಮಾಡುವಅಧಿಕಾರವನ್ನು ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗೆ ನೀಡಲಾಗುವುದು. ಜಿಲ್ಲಾಧಿಕಾರಿ ಇದಕ್ಕೆ ಸಹಯೋಗ ನೀಡುತ್ತಾರೆ’ ಎಂದು ಹೇಳಿದರು.