ಚಾಮರಾಜನಗರ: ಬಲವಂತವಾಗಿ ಅಂಗಡಿ ಮುಚ್ಚಿಸಲು ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದರು.
ನಗರದಲ್ಲಿ ವ್ಯಾಪಾರ ವಹಿವಾಟು ಎಂದಿನಂತೆ ಸಹಜವಾಗಿದೆ. ಖಾಸಗಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರವೂ ಎಂದಿನಂತಿದೆ. ಜನರಿಗೆ ಬಂದ್ ಬಿಸಿ ತಟ್ಟಿಲ್ಲ.
ಚಾಮರಾಜನಗರದಲ್ಲಿ ಬಂದ್ ಸಂಪೂರ್ಣ ವಿಫಲಗೊಂಡಿದೆ. ಖಾಸಗಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳು ಆಟೊಗಳು ಎಂದಿನಂತೆ ಸಂಚಾರ ಆರಂಭಿಸಿವೆ. ಅಂಗಡಿ ಮುಂಗಟ್ಟುಗಳು ತೆರೆದಿದ್ದು ವಹಿವಾಟು ಸಾಗಿದೆ.