ಬೆಂಗಳೂರು: ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಬಡವರ ಮನೆ ನಿರ್ಮಾಣದಲ್ಲಿ ಯಾವುದೇ ಅಡಚಣೆ ಆಗಬಾರದು ಎಂಬ ಕಾರಣಕ್ಕೆ ವಾರದೊಳಗೆ ಫಲಾನುಭವಿಗಳಿಗೆ ₹400 ಕೋಟಿ ನೀಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ದ ಮಾರ್ಗದರ್ಶಿ ಸೂತ್ರದಂತೆ 1.02 ಲಕ್ಷ ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದರು.
ಕರ್ನಾಟಕ ಗೃಹ ಮಂಡಳಿ ವತಿಯಿಂದ ಬೆಂಗಳೂರಿನಲ್ಲಿ 1 ಲಕ್ಷ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸುವ ಯೋಜನೆಯ ಭಾಗವಾಗಿ 46 ಸಾವಿರ ಕಟ್ಟಡಗಳ ಕಾಮಗಾರಿ ಆರಂಭವಾಗಿದೆ. ಜಿಗಣಿ ಸಮೀಪ 30 ಸಾವಿರ ನಿವೇಶನಗಳನ್ನು ಅಭಿವೃದ್ಧಿಪಡಿಸುವ ಕಾರ್ಯ ಆರಂಭವಾಗಿದೆ ಎಂದರು.