ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

49 ತಾಲ್ಲೂಕು ಈಗಲೂ ಬರಪೀಡಿತ: ಸಚಿವ ಆರ್. ಅಶೋಕ

Last Updated 30 ಏಪ್ರಿಲ್ 2020, 21:41 IST
ಅಕ್ಷರ ಗಾತ್ರ

ಬೆಂಗಳೂರು: ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಕಾರಣಕ್ಕೆ ಬರ ಪೀಡಿತ ಎಂದು ಘೋಷಿತವಾಗಿರುವ49 ತಾಲ್ಲೂಕುಗಳಿಗೆ ಇನ್ನೂ ಒಂದು ತಿಂಗಳು ಇದೇ ಹಣೆ ಪಟ್ಟಿ ಸಿಗಲಿದೆ.

ಗುರುವಾರ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ ಅವರು, ಈ ತಾಲ್ಲೂಕುಗಳಲ್ಲಿ ಮುಂಗಾರು ಪೂರ್ವ ಮಳೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಇನ್ನೊಂದು ತಿಂಗಳ ಅವಧಿಗೆ ಬರ ಪೀಡಿತ ಘೋಷಣೆ ಹೊರಡಿಸಲಾಗಿದೆ ಎಂದರು.

ಈ ಘೋಷಣೆಯಿಂದಾಗಿ ಇಲ್ಲಿ ಕುಡಿಯುವ ನೀರು ಪೂರೈಕೆ, ಬರ ಕಾಮಗಾರಿ ಮುಂದುವರಿಸಲು ಸಾಧ್ಯವಾಗುತ್ತದೆ. ಇಲ್ಲವಾದರೆ, ಇವತ್ತಿಗೆ ಎಲ್ಲ ಕಾರ್ಯಗಳೂ ನಿಂತು ಹೋಗುತ್ತವೆ. ನಾಳೆಯಿಂದ ಕಾಮಗಾರಿಗಳು ಮುಂದುವರಿಯಬೇಕು ಎಂಬ ಕಾರಣಕ್ಕೆ ಈ ಆದೇಶ ಹೊರಡಿಸಲಾಗುವುದು ಎಂದರು.

ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಮಳೆ ಬಂದು ಹಾನಿಯಾಗಿದೆ. ಮುಂಗಾರು ಮಳೆ ಆರಂಭವಾಗುವುದರೊಳಗೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT