ಬೆಂಗಳೂರು: ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಕಾರಣಕ್ಕೆ ಬರ ಪೀಡಿತ ಎಂದು ಘೋಷಿತವಾಗಿರುವ49 ತಾಲ್ಲೂಕುಗಳಿಗೆ ಇನ್ನೂ ಒಂದು ತಿಂಗಳು ಇದೇ ಹಣೆ ಪಟ್ಟಿ ಸಿಗಲಿದೆ.
ಗುರುವಾರ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ ಅವರು, ಈ ತಾಲ್ಲೂಕುಗಳಲ್ಲಿ ಮುಂಗಾರು ಪೂರ್ವ ಮಳೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಇನ್ನೊಂದು ತಿಂಗಳ ಅವಧಿಗೆ ಬರ ಪೀಡಿತ ಘೋಷಣೆ ಹೊರಡಿಸಲಾಗಿದೆ ಎಂದರು.
ಈ ಘೋಷಣೆಯಿಂದಾಗಿ ಇಲ್ಲಿ ಕುಡಿಯುವ ನೀರು ಪೂರೈಕೆ, ಬರ ಕಾಮಗಾರಿ ಮುಂದುವರಿಸಲು ಸಾಧ್ಯವಾಗುತ್ತದೆ. ಇಲ್ಲವಾದರೆ, ಇವತ್ತಿಗೆ ಎಲ್ಲ ಕಾರ್ಯಗಳೂ ನಿಂತು ಹೋಗುತ್ತವೆ. ನಾಳೆಯಿಂದ ಕಾಮಗಾರಿಗಳು ಮುಂದುವರಿಯಬೇಕು ಎಂಬ ಕಾರಣಕ್ಕೆ ಈ ಆದೇಶ ಹೊರಡಿಸಲಾಗುವುದು ಎಂದರು.
ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಮಳೆ ಬಂದು ಹಾನಿಯಾಗಿದೆ. ಮುಂಗಾರು ಮಳೆ ಆರಂಭವಾಗುವುದರೊಳಗೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲಾಗುವುದು ಎಂದರು.