<p><strong>ಬೆಂಗಳೂರು:</strong> ಸಮಗ್ರ ಮರಳು ನೀತಿ ರೂಪಿಸುವಂತೆ ಒತ್ತಾಯಿಸಿ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟರುಗಳ ಒಕ್ಕೂಟ ಕರೆ ನೀಡಿರುವ ಮರಳು ಲಾರಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಕಟ್ಟಡ ನಿರ್ಮಾಣ ಕಾರ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದೆ.<br /> <br /> ರಾಜ್ಯದಾದ್ಯಂತ 45 ಸಾವಿರ ಲಾರಿಗಳು ಸೇವೆ ಸ್ಥಗಿತಗೊಳಿಸಿವೆ. ಬೆಂಗಳೂರು ನಗರಕ್ಕೆ ನಿತ್ಯ ಮೂರು ಸಾವಿರ ಲೋಡ್ ಮರಳು ಪೂರೈಕೆಯಾಗುತ್ತಿತ್ತು. ಆದರೆ ಮುಷ್ಕರದ ಹಿನ್ನೆಲೆಯಲ್ಲಿ ಮರಳು ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದ್ದು, ಕಟ್ಟಡ ನಿರ್ಮಾಣಕಾರರು ಪರದಾಡುವಂತಾಗಿದೆ.<br /> <br /> `ರಾಜ್ಯದಲ್ಲಿ ಮರಳು ನೀತಿ ಇಲ್ಲ. ಆದ್ದರಿಂದ ಮರಳು ಸಾಗಣೆ ಕಷ್ಟಸಾಧ್ಯವಾಗಿದೆ. ಮರಳು ಸಾಗಣೆದಾರರಿಗೆ ಗಣಿ- ಭೂ ವಿಜ್ಞಾನ ಇಲಾಖೆ, ಪೊಲೀಸ್ ಅಧಿಕಾರಿಗಳು ಮತ್ತು ತಹಶೀಲ್ದಾರ್ಗಳು ಕಿರುಕುಳ ನೀಡುತ್ತಿದ್ದಾರೆ. ಐವತ್ತು ಸಾವಿರದಿಂದ ಒಂದು ಲಕ್ಷ ರೂಪಾಯಿವರೆಗೆ ದಂಡ ವಿಧಿಸುತ್ತಿದ್ದಾರೆ. ಈ ಕಿರುಕುಳ ತಾಳಲಾರದೆ ನೂರಾರು ಮಂದಿ ಲಾರಿ ಮಾಲೀಕರು ವಾಹನವನ್ನೇ ಮಾರಾಟ ಮಾಡಿ ಬೀದಿಗೆ ಬಂದಿದ್ದಾರೆ~ ಎಂದು ಒಕ್ಕೂಟದ ಅಧ್ಯಕ್ಷ ಜಿ.ಆರ್.ಷಣ್ಮುಖಪ್ಪ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> `ಸರ್ಕಾರ ಮರಳು ನೀತಿ ರೂಪಿಸಿ ಮರಳು ತುಂಬುವ ಪ್ರದೇಶವನ್ನು ಹರಾಜು ಮಾಡಿದರೆ ಈ ಸಮಸ್ಯೆ ಬಗೆಹರಿಯಲಿದೆ. ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಮರಳು ಸಾಗಣೆಗೆ ಪರವಾನಗಿ ನೀಡಿದ್ದರು. ಆ ನಂತರ ಬಂದ ಬಿಜೆಪಿ ಸರ್ಕಾರ ಈ ಬಗ್ಗೆ ಏನೂ ಕ್ರಮ ಕೈಗೊಳ್ಳಲಿಲ್ಲ. <br /> <br /> ಮರಳನ್ನು ಎಲ್ಲಿಂದ ತರಬೇಕು ಎಂಬುದೇ ಗೊತ್ತಾಗದಂತಾಗಿದೆ. ಮರಳನ್ನು ತಂದರೂ ಅಧಿಕಾರಿಗಳಿಗೆ ಲಂಚ ನೀಡಬೇಕಾದ ಪರಿಸ್ಥಿತಿ ಇದೆ. ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರಿಗೆ ಈ ಬಗ್ಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಸರ್ಕಾರ ಬೇಡಿಕೆ ಈಡೇರಿಸುವವರೆಗೂ ಮುಷ್ಕರ ನಿಲ್ಲದು~ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಮಗ್ರ ಮರಳು ನೀತಿ ರೂಪಿಸುವಂತೆ ಒತ್ತಾಯಿಸಿ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟರುಗಳ ಒಕ್ಕೂಟ ಕರೆ ನೀಡಿರುವ ಮರಳು ಲಾರಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಕಟ್ಟಡ ನಿರ್ಮಾಣ ಕಾರ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದೆ.<br /> <br /> ರಾಜ್ಯದಾದ್ಯಂತ 45 ಸಾವಿರ ಲಾರಿಗಳು ಸೇವೆ ಸ್ಥಗಿತಗೊಳಿಸಿವೆ. ಬೆಂಗಳೂರು ನಗರಕ್ಕೆ ನಿತ್ಯ ಮೂರು ಸಾವಿರ ಲೋಡ್ ಮರಳು ಪೂರೈಕೆಯಾಗುತ್ತಿತ್ತು. ಆದರೆ ಮುಷ್ಕರದ ಹಿನ್ನೆಲೆಯಲ್ಲಿ ಮರಳು ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದ್ದು, ಕಟ್ಟಡ ನಿರ್ಮಾಣಕಾರರು ಪರದಾಡುವಂತಾಗಿದೆ.<br /> <br /> `ರಾಜ್ಯದಲ್ಲಿ ಮರಳು ನೀತಿ ಇಲ್ಲ. ಆದ್ದರಿಂದ ಮರಳು ಸಾಗಣೆ ಕಷ್ಟಸಾಧ್ಯವಾಗಿದೆ. ಮರಳು ಸಾಗಣೆದಾರರಿಗೆ ಗಣಿ- ಭೂ ವಿಜ್ಞಾನ ಇಲಾಖೆ, ಪೊಲೀಸ್ ಅಧಿಕಾರಿಗಳು ಮತ್ತು ತಹಶೀಲ್ದಾರ್ಗಳು ಕಿರುಕುಳ ನೀಡುತ್ತಿದ್ದಾರೆ. ಐವತ್ತು ಸಾವಿರದಿಂದ ಒಂದು ಲಕ್ಷ ರೂಪಾಯಿವರೆಗೆ ದಂಡ ವಿಧಿಸುತ್ತಿದ್ದಾರೆ. ಈ ಕಿರುಕುಳ ತಾಳಲಾರದೆ ನೂರಾರು ಮಂದಿ ಲಾರಿ ಮಾಲೀಕರು ವಾಹನವನ್ನೇ ಮಾರಾಟ ಮಾಡಿ ಬೀದಿಗೆ ಬಂದಿದ್ದಾರೆ~ ಎಂದು ಒಕ್ಕೂಟದ ಅಧ್ಯಕ್ಷ ಜಿ.ಆರ್.ಷಣ್ಮುಖಪ್ಪ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> `ಸರ್ಕಾರ ಮರಳು ನೀತಿ ರೂಪಿಸಿ ಮರಳು ತುಂಬುವ ಪ್ರದೇಶವನ್ನು ಹರಾಜು ಮಾಡಿದರೆ ಈ ಸಮಸ್ಯೆ ಬಗೆಹರಿಯಲಿದೆ. ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಮರಳು ಸಾಗಣೆಗೆ ಪರವಾನಗಿ ನೀಡಿದ್ದರು. ಆ ನಂತರ ಬಂದ ಬಿಜೆಪಿ ಸರ್ಕಾರ ಈ ಬಗ್ಗೆ ಏನೂ ಕ್ರಮ ಕೈಗೊಳ್ಳಲಿಲ್ಲ. <br /> <br /> ಮರಳನ್ನು ಎಲ್ಲಿಂದ ತರಬೇಕು ಎಂಬುದೇ ಗೊತ್ತಾಗದಂತಾಗಿದೆ. ಮರಳನ್ನು ತಂದರೂ ಅಧಿಕಾರಿಗಳಿಗೆ ಲಂಚ ನೀಡಬೇಕಾದ ಪರಿಸ್ಥಿತಿ ಇದೆ. ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರಿಗೆ ಈ ಬಗ್ಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಸರ್ಕಾರ ಬೇಡಿಕೆ ಈಡೇರಿಸುವವರೆಗೂ ಮುಷ್ಕರ ನಿಲ್ಲದು~ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>