‘ಸಿಎಜಿ ವರದಿ–ಭ್ರಷ್ಟ ಕಾಂಗ್ರೆಸ್ ಸರ್ಕಾರದ ಲೂಟಿ ಅವಧಿ’ ಎಂಬ ಕಿರು ಹೊತ್ತಗೆ ಬಿಡುಗಡೆ ಮಾಡಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ‘2016–17ರಲ್ಲಿ ಮಾಡಿರುವ ಖರ್ಚು ಹಾಗೂ ಸ್ವೀಕೃತಿಗೆ ತಾಳೆಯೇ ಆಗುತ್ತಿಲ್ಲ. ₹1.86 ಲಕ್ಷ ಕೋಟಿ ಬಜೆಟ್ನಲ್ಲಿ ಶೇ 19ರಷ್ಟು ಮೊತ್ತಕ್ಕೆ ಲೆಕ್ಕವೇ ಇಲ್ಲ ಎಂದು ಭಾರತದ ಲೆಕ್ಕ ನಿಯಂತ್ರಕರು ಹಾಗೂ ಮಹಾ ಲೆಕ್ಕ ಪರಿಶೋಧಕರ(ಸಿಎಜಿ) ವರದಿ ಉಲ್ಲೇಖಿಸಿದೆ. ಭಾರಿ ಮೊತ್ತದ ಭ್ರಷ್ಟಾಚಾರ, ಅವ್ಯವಹಾರ ನಡೆದಿರುವ ಬಗ್ಗೆ ಅನುಮಾನ ಇದೆ’ ಎಂದು ಹೇಳಿದರು.