ಈ ಕುರಿತಂತೆ ‘ಕರ್ನಾಟಕ ಗಡಿ ರಕ್ಷಣಾ ಹಾಗೂ ನದಿಗಳ ಆಯೋಗ’ದ ಅಧ್ಯಕ್ಷ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಅವರನ್ನು ಭೇಟಿ ಮಾಡಿದ ರೈತ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ವೀರೇಶ್ ಸೊಬರದ ಮಠ ಸ್ವಾಮೀಜಿ ನೇತೃತ್ವದ ನಿಯೋಗವು, ‘ಉತ್ತರ ಕರ್ನಾಟಕದ ರೈತರ ಪಾಲಿಗೆ ಉಪಯುಕ್ತವಾದ ಈ ಯೋಜನೆಯನ್ನು ಸರ್ಕಾರಕ್ಕೆ ಮನದಟ್ಟು ಮಾಡಿಕೊಡಬೇಕು’ ಎಂದು ಒತ್ತಾಯಿಸಿತು.