ಪಕ್ಷದ ಎಲ್ಲ ಶಾಸಕರು ದೆಹಲಿಯಿಂದ ವಾಪಸ್ ಬರಬೇಕು ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶನಿವಾರ ಬೆಳಿಗ್ಗೆ ನಿರ್ದೇಶನ ನೀಡಿದರು. ಶಾಸಕರು ಕ್ಷೇತ್ರದಲ್ಲಿದ್ದು ಬರ ಸಮಸ್ಯೆಗೆ ಸ್ಪಂದಿಸಬೇಕು ಎಂದು ನಿರ್ದೇಶನ ನೀಡಿದರು. ಯಡಿಯೂರಪ್ಪ ನೇತೃತ್ವದ ಏಳು ನಾಯಕರ ತಂಡ ಬರಪೀಡಿತ ಜಿಲ್ಲೆಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಪ್ರವಾಸ ಮಾಡಲಿದೆ. ತಂಡದಲ್ಲಿ ಎನ್.ರವಿಕುಮಾರ್, ಬಿ.ಎನ್.ಬಚ್ಚೇಗೌಡ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಜಯದೇವ್, ಮರಿಸ್ವಾಮಿ, ವೆಂಕಟಮುನಿಯಪ್ಪ ಇದ್ದಾರೆ.