ಅತೃಪ್ತ ಬಣದಲ್ಲಿರುವ ಚಿಂಚೋಳಿ ಶಾಸಕ ಉಮೇಶ ಜಾಧವ ಅವರಿಗೆ ಹಂಚಿಕೆ ಮಾಡಿದ್ದ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನವನ್ನು ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ ಅವರಿಗೆ ನೀಡಲಾಗಿದೆ. ರಾಯಚೂರು ಗ್ರಾಮಾಂತರ ಶಾಸಕ ಬಸವನಗೌಡ ದದ್ದಲ್ ಅವರನ್ನು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇಬ್ಬರಿಗೂ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ. ಈ ಇಬ್ಬರೂ ಬಿಜೆಪಿ ಕಡೆಗೆ ವಾಲುವ ಅನುಮಾನ ವ್ಯಕ್ತವಾಗಿತ್ತು.