‘ದೇವೇಗೌಡರಿಗೆ ವಯಸ್ಸಾಯಿತು, ಕುಮಾರಸ್ವಾಮಿಗೆ ಆರೋಗ್ಯ ಸರಿ ಇಲ್ಲ. ಇಬ್ಬರೂ ಹೋದರೆ ಪಕ್ಷಕ್ಕೆ ಉಳಿಗಾಲ ಇಲ್ಲ’ ಎಂದು ಪ್ರೀತಂ ಗೌಡ ಮಾತನಾಡಿರುವುದು ಆಡಿಯೊದಲ್ಲಿದೆ. ಈ ಬಗ್ಗೆ ಆಕ್ಷೇಪಗಳು ವ್ಯಕ್ತವಾಗಿವೆ. ಜತೆಗೆ ಇದೇ ವಿಷಯನ್ನು ಮುಂದಿಟ್ಟುಕೊಂಡು ಜೆಡಿಎಸ್ ಕಾರ್ಯಕರ್ತರು ಪ್ರೀತಂ ಗೌಡ ನಿವಾಸದ ಎದುರು ಇಂದು ಪ್ರತಿಭಟನೆಯನ್ನೂ ಮಾಡಿದ್ದಾರೆ. ಈ ವೇಳೆ ಬಿಜೆಪಿಯ ಕಾರ್ಯಕರ್ತನಿಗೆ ಕಲ್ಲೇಟು ಬಿದ್ದು, ಗಾಯಗೊಂಡಿದ್ದಾರೆ.