ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಗರದಲ್ಲಿ ಈಚೆಗೆ ನಡೆದ ಜಿಲ್ಲಾ ಮಟ್ಟದ ಸದಸ್ಯರ ಸಭೆಯಲ್ಲಿ ಕೆಲವರು ಖರ್ಗೆ ವಿರುದ್ಧ ಕಿಡಿಕಾರಿದ್ದರು.ಅವರನ್ನು ಸೋಲಿಸಲು ಬಿಜೆಪಿ ಅಭ್ಯರ್ಥಿಗೆ ಮತ ಹಾಕಬೇಕು ಎಂದೂ ಹೇಳಿದ್ದರು.ಆದರೆ, ಇದು ಅವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅಂದಿನ ಸಭೆಯಲ್ಲಿದ್ದ ಬಹುಪಾಲು ಸದಸ್ಯರು ಇದನ್ನು ಒಪ್ಪಿಲ್ಲ’ ಎಂದು ಸ್ಪಷ್ಟಪಡಿಸಿದರು.