ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿಡಿ ನುಡಿ: ಬೆನ್ನಿಗೆ ಚೂರಿ ಹಾಕುವವರು ಬೇಕಾಗಿಲ್ಲ: ಕುಮಾರಸ್ವಾಮಿ

Last Updated 21 ಮಾರ್ಚ್ 2019, 20:27 IST
ಅಕ್ಷರ ಗಾತ್ರ

*‌ ಮಂಡ್ಯದಲ್ಲಿ ಕೆಲವು ಕಾಂಗ್ರೆಸಿಗರು ತುಂಬಾ ಮುಂದೆ ಹೋಗಿದ್ದಾರೆ. ನಾನು ಸ್ವಾಭಿಮಾನ ಕಳೆದುಕೊಂಡು ಅಂಥವರು ಮುಂದೆ ಹೋಗಿ ಭಿಕ್ಷೆ ಬೇಡಲ್ಲ. ಬೆನ್ನಿಗೆ ಚೂರಿ ಹಾಕುವವರು ಬೇಕಾಗಿಲ್ಲ. ನನ್ನ ಕಾರ್ಯಕರ್ತರು ಸಮರ್ಥರಿದ್ದಾರೆ, ಅವರೇ ಸಾಕು. ಮೂಲ ಕಾಂಗ್ರೆಸ್ಸಿಗರು ನಿಖಿಲ್‌ಗೆ ಆಶೀರ್ವಾದ ಮಾಡಿದ್ದಾರೆ

-ಎಚ್‌.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ

*ಯಾದಗಿರಿ ಜಿಲ್ಲೆ ಮತ್ತು ರಾಜ್ಯದಲ್ಲಿ ಜೆಡಿಎಸ್‌ನವರದ್ದೇ ನಡೆಯೋದು. ಕಾಂಗ್ರೆಸ್‌ ನಾಯಕರ ಮಾತಿಗೆ ಗೌರವವಿಲ್ಲ. ನಾವೆಲ್ಲಾ ಹಿರಿಯರಾದರೂ ರಾಜಕೀಯದಲ್ಲಿ ಚಿಕ್ಕವರಾದ ಜೆಡಿಎಸ್‌ ನಾಯಕರ ಮುಂದೆ ಹೋಗಿ ನಿಲ್ಲಬೇಕು. ಪಕ್ಷದ ರಾಜ್ಯ ನಾಯಕರ ಗಮನಕ್ಕೆ ತಂದರೂ ಪ್ರಯೋಜನ ಆಗಿಲ್ಲ

-ಎ.ಬಿ. ಮಾಲಕರಡ್ಡಿ, ಕಾಂಗ್ರೆಸ್‌ನ ಮಾಜಿ ಶಾಸಕ

* ಸಾರ್ವಜನಿಕ ಜೀವನದಲ್ಲಿರುವ ರಾಜಕಾರಣಿಗಳಿಗೆ ಲಜ್ಜೆ ಇರಬೇಕು. ಜನಪ್ರತಿನಿಧಿಗಳು ಲಜ್ಜಾಹೀನವಾಗಿ ಬದುಕಬಾರದು. ರಾಜಕೀಯ ಲಾಭಕ್ಕಾಗಿ ಜನರ ಮಾನ ಕಳೆಯಬಾರದು. ಆಗ ಮಾತ್ರ ಪ್ರಜಾಸತ್ತೆಗೆ ಗೌರವ ಸಿಗುತ್ತದೆ

-ಕೆ.ಆರ್‌.ರಮೇಶ್‌ಕುಮಾರ್‌, ವಿಧಾನಸಭಾಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT