ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಮಪತ್ರ ಸಲ್ಲಿಸದ ನಿಖಿಲ್‌

Last Updated 21 ಮಾರ್ಚ್ 2019, 18:52 IST
ಅಕ್ಷರ ಗಾತ್ರ

ಮಂಡ್ಯ: ಜ್ಯೋತಿಷಿಗಳ ಸಲಹೆಯಂತೆ ಗುರುವಾರ ನಿಗದಿಯಾಗಿದ್ದ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆಯನ್ನು ಕೊನೆ ಗಳಿಗೆಯಲ್ಲಿ ಕೈಬಿಡಲಾಯಿತು. ಮಾರ್ಚ್‌ 25ರಂದು ಒಂದೇ ಬಾರಿಗೆ ನಾಮಪತ್ರ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಯಿತು.

ಕೇವಲ ಕುಟುಂಬ ಸದಸ್ಯರೊಂದಿಗೆ ನಿಖಿಲ್‌ ನಾಮಪತ್ರ ಸಲ್ಲಿಸುತ್ತಾರೆ ಎಂದು ಜೆಡಿಎಸ್‌ ಮುಖಂಡರು ತಿಳಿಸಿದ್ದರು.

‘ಗುರುವಾರ ಒಳ್ಳೆಯ ದಿನ’ ಎಂಬ ಜ್ಯೋತಿಷಿಗಳ ಸಲಹೆಗೆ ವರಿಷ್ಠ ಎಚ್‌.ಡಿ.ದೇವೇಗೌಡರು ಸಮಯ ನಿಗದಿ ಮಾಡಿದ್ದರು. ಆದರೆ ಎರಡು ದಿನ ನಾಮಪತ್ರ ಸಲ್ಲಿಸಿದರೆ ಜನರಲ್ಲಿ ಗೊಂದಲ ಉಂಟಾಗುತ್ತದೆ ಎಂಬ ಕಾರಣಕ್ಕೆ ಒಂದೇ ದಿನ ನಾಮಪತ್ರ ಸಲ್ಲಿಸಲು ನಿರ್ಧರಿಸಲಾಗಿದೆ. ಸುಮಲತಾ ಸಮಾವೇಶಕ್ಕಿಂತ ಹೆಚ್ಚು ಜನರನ್ನು ಸೇರಿಸಿ, ಶಕ್ತಿ ಪ್ರದರ್ಶನ ಮಾಡಲು ಜೆಡಿಎಸ್ ಮುಖಂಡರು ಮುಂದಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT