‘ಗುರುವಾರ ಒಳ್ಳೆಯ ದಿನ’ ಎಂಬ ಜ್ಯೋತಿಷಿಗಳ ಸಲಹೆಗೆ ವರಿಷ್ಠ ಎಚ್.ಡಿ.ದೇವೇಗೌಡರು ಸಮಯ ನಿಗದಿ ಮಾಡಿದ್ದರು. ಆದರೆ ಎರಡು ದಿನ ನಾಮಪತ್ರ ಸಲ್ಲಿಸಿದರೆ ಜನರಲ್ಲಿ ಗೊಂದಲ ಉಂಟಾಗುತ್ತದೆ ಎಂಬ ಕಾರಣಕ್ಕೆ ಒಂದೇ ದಿನ ನಾಮಪತ್ರ ಸಲ್ಲಿಸಲು ನಿರ್ಧರಿಸಲಾಗಿದೆ. ಸುಮಲತಾ ಸಮಾವೇಶಕ್ಕಿಂತ ಹೆಚ್ಚು ಜನರನ್ನು ಸೇರಿಸಿ, ಶಕ್ತಿ ಪ್ರದರ್ಶನ ಮಾಡಲು ಜೆಡಿಎಸ್ ಮುಖಂಡರು ಮುಂದಾಗಿದ್ದಾರೆ.