ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆಗೆ ಗೈರಾದ ಕಾರಣಕ್ಕೆ ಶಾಸಕರಾದ ಜಾಧವ, ರಮೇಶ ಜಾರಕಿಹೊಳಿ, ಬಿ. ನಾಗೇಂದ್ರ ಮತ್ತು ಮಹೇಶ ಕುಮಠಳ್ಳಿ ಅವರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸುವಂತೆ ಸಭಾಧ್ಯಕ್ಷರಿಗೆ ಸಿಎಲ್ಪಿ ನಾಯಕ ಸಿದ್ದರಾಮಯ್ಯ ದೂರು ನೀಡಿದ್ದರು. ಪಕ್ಷದ ವಿಫ್ ಉಲ್ಲಂಘಿಸಿದ ಕಾರಣಕ್ಕೂ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದರು.