ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಸಭೆ ಅಧ್ಯಕ್ಷ ಕೆ.ಆರ್.ರಮೇಶಕುಮಾರ್ ಅವರಿಗೆ ಮಾ.4 ರಂದು ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ಅವರು ಚೆನ್ನಾಗಿಯೇ ಸ್ಪಂದಿಸಿದ್ದಾರೆ. ಕಾನೂನುಬದ್ಧವಾಗಿ ತೀರ್ಪು ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಮಾ.25ರ ಸಂಜೆವರೆಗೆ ರಾಜೀನಾಮೆ ಅಂಗೀಕಾರವಾಗುವ ವಿಶ್ವಾಸವಿದೆ. ಈ ಬಗ್ಗೆ ಕಾನೂನು ತಜ್ಞರು ಕೂಡ ಅಭಯ ನೀಡಿದ್ದಾರೆ’ ಎಂದರು.