ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನರ್ಹಗೊಂಡರೂ ಸ್ಪರ್ಧೆಗೆ ಅಡ್ಡಿ ಇಲ್ಲ: ಜಾಧವ

Last Updated 22 ಮಾರ್ಚ್ 2019, 20:15 IST
ಅಕ್ಷರ ಗಾತ್ರ

ಕಲಬುರ್ಗಿ: ‘ಶಾಸಕ ಸ್ಥಾನಕ್ಕೆ ಸಲ್ಲಿಸಿರುವ ರಾಜೀನಾಮೆ ಅಂಗೀಕಾರವಾಗುವ ವಿಶ್ವಾಸವಿದೆ. ಒಂದೊಮ್ಮೆ ಅನರ್ಹಗೊಂಡರೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಯಾವುದೇ ರೀತಿಯ ಕಾನೂನು ತೊಡಕು ಎದುರಾಗದು’ ಎಂದು ಗುಲಬರ್ಗಾ ಲೋಕಸಭೆ ಕ್ಷೇತ್ರದ ಬಿಜೆಪಿ ನಿಯೋಜಿತ ಅಭ್ಯರ್ಥಿ ಡಾ.ಉಮೇಶ ಜಾಧವ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಸಭೆ ಅಧ್ಯಕ್ಷ ಕೆ.ಆರ್.ರಮೇಶಕುಮಾರ್ ಅವರಿಗೆ ಮಾ.4 ರಂದು ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ಅವರು ಚೆನ್ನಾಗಿಯೇ ಸ್ಪಂದಿಸಿದ್ದಾರೆ. ಕಾನೂನುಬದ್ಧವಾಗಿ ತೀರ್ಪು ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಮಾ.25ರ ಸಂಜೆವರೆಗೆ ರಾಜೀನಾಮೆ ಅಂಗೀಕಾರವಾಗುವ ವಿಶ್ವಾಸವಿದೆ. ಈ ಬಗ್ಗೆ ಕಾನೂನು ತಜ್ಞರು ಕೂಡ ಅಭಯ ನೀಡಿದ್ದಾರೆ’ ಎಂದರು.

‘ಬಹಳಷ್ಟು ಜನ ಶಾಸಕರು ಪಕ್ಷ ಬಿಡಲು ತಯಾರಾಗಿದ್ದಾರೆ. ಅವರಿಗೆ ಸಂದೇಶ ರವಾನಿಸುವ ಉದ್ದೇಶದಿಂದ ರಾಜೀನಾಮೆ ಅಂಗೀಕಾರವನ್ನು ವಿಳಂಬ ಮಾಡಲಾಗುತ್ತಿದೆ. ನನ್ನನ್ನು ಶಾಸಕತ್ವದಿಂದ ಅನರ್ಹಗೊಳಿಸುವುದರಿಂದ ಟಿಕೆಟ್ ಸಿಗುವುದು ಕಷ್ಟ ಎಂದು ಗೊಂದಲ ಸೃಷ್ಟಿಸಲಾಯಿತು. ಒಂದು ವೇಳೆ ರಾಜೀನಾಮೆ ಅಂಗೀಕಾರ ಆಗದಿದ್ದರೂ ಲೋಕಸಭೆ ಚುನಾವಣೆಗೆಗೆ ಸ್ಪರ್ಧಿಸುವುದು ಖಚಿತ’ ಎಂದು ತಿಳಿಸಿದರು.

‘ಖರ್ಗೆ ಆಸ್ತಿ ತನಿಖೆಯಾಗಲಿ’

‘ಸಂಸದ ಮಲ್ಲಿಕಾರ್ಜುನ ಖರ್ಗೆ ಅವರ ಆಸ್ತಿ ಎಷ್ಟಿದೆ, ಎಲ್ಲೆಲ್ಲಿ ಇದೆ, ಯಾರ ಹೆಸರಿನಲ್ಲಿದೆ ಎಂಬುದರ ಬಗ್ಗೆ ತನಿಖೆಯಾಗಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಒತ್ತಾಯಿಸಿದರು.

‘ತಮ್ಮ ಆಸ್ತಿಯ ನಿಖರ ಮಾಹಿತಿ ಹೊರಬರದಂತೆ ಸಾಕಷ್ಟು ತಂತ್ರಗಳನ್ನು ಮಾಡುತ್ತಿದ್ದಾರೆ. ಹೈದರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿಗೆ ಖರ್ಗೆ ಅವರೇ ಅಡ್ಡಿಯಾಗಿದ್ದಾರೆ. ಕೇವಲ ತಮ್ಮ ಹಾಗೂ ತಮ್ಮ ಮಗನ ಅಭಿವೃದ್ಧಿ ಮಾಡಿಕೊಂಡಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT