ರಾಜ್ಯದಲ್ಲಿ ಮಾರ್ಚ್ 8ರಂದು ಬೆಂಗಳೂರಿನಲ್ಲಿ ಪ್ರಥಮ ಕೋವಿಡ್ ಪ್ರಕರಣ ವರದಿಯಾಗಿತ್ತು. ಹಂತ ಹಂತವಾಗಿ ವಿಸ್ತರಿಸಿದ ಸೋಂಕು, ಈಗ ರಾಜ್ಯದ 25 ಜಿಲ್ಲೆಗಳನ್ನು ವ್ಯಾಪಿಸಿಕೊಂಡಿದೆ. ನಿತ್ಯ ಸರಾಸರಿ 4,500 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಇದರಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಲಾಕ್ ಡೌನ್ ಸಡಿಲಿಕೆಯ ಜತೆಗೆ ಅನ್ಯ ರಾಜ್ಯ ಹಾಗೂ ವಿದೇಶಿಗರನ್ನು ಕರೆತಂದಿರುವುದು ಕೂಡ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಲು ಪ್ರಮುಖ ಕಾರಣ. ಕೆಂಪು ವಲಯವಾಗಿದ್ದ ಮೈಸೂರಿನಲ್ಲಿ ಎಲ್ಲ ರೋಗಿಗಳು ಗುಣಮುಖರಾಗಿದ್ದಾರೆ.