<p><strong>ಬೆಳಗಾವಿ: ‘</strong>ತಮ್ಮ ಕಡೆ ಬರುವಂತೆ ಕಳೆದ ಆರು ತಿಂಗಳಿನಿಂದಲೂ ಬಿಜೆಪಿಯವರು ಆಮಿಷವೊಡ್ಡುತ್ತಿದ್ದಾರೆ. ಕಾಂಗ್ರೆಸ್ನಲ್ಲಿ ಅಸಮಾಧಾನವಿರುವ 7–8 ಜನ ಶಾಸಕರು ಹೋದರೂ ಹೋಗಬಹುದು. ಆದರೆ, ನಾನು ಹೋಗುವುದಿಲ್ಲ’ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.</p>.<p>ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಅಸಮಾಧಾನ, ಭಿನ್ನಾಭಿಪ್ರಾಯ ಸಹಜವಾದುದು. ಹಾಗಂತ ಎಲ್ಲರೂ ಪಕ್ಷ ಬಿಟ್ಟು ಹೋಗುತ್ತಾರೆ ಎಂದರ್ಥವಲ್ಲ ಎಂದು ನುಡಿದರು.</p>.<p>ಪಕ್ಷದಲ್ಲಿ ಅಸಮಾಧಾನಗೊಂಡ 7–8 ಜನ ಶಾಸಕರು ಇದ್ದಾರೆ. ಅವರನ್ನು ಸಮಾಧಾನ ಪಡಿಸುವ ಕೆಲಸವನ್ನು ವರಿಷ್ಠರು ಮಾಡಬೇಕು. ಅವರು ಬಿಟ್ಟು ಹೋದರೆ ಸರ್ಕಾರಕ್ಕೇನೂ ತೊಂದರೆಯಾಗಲ್ಲ. ಆದರೆ, 25 ಶಾಸಕರು ಹೋದರೆ ತೊಂದರೆಯಾಗುತ್ತದೆ ಎಂದು ಹೇಳಿದರು.</p>.<p><strong>ಆಡಿಯೊ ಕ್ಲಿಪ್ ಇವತ್ತಿನಿಂದಲ್ಲ:</strong>ಶ್ರೀರಾಮುಲು ಆಪ್ತ ಹಾಗೂ ದುಬೈ ಉದ್ಯಮಿ ಎನ್ನಲಾದ ವ್ಯಕ್ತಿಗಳ ನಡುವೆ ನಡೆದ ಸಂಭಾಷಣೆಯ ಆಡಿಯೊ ಕ್ಲಿಪ್ ಬಹಿರಂಗಗೊಂಡ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ‘ಆಡಿಯೊ ಕ್ಲಿಪ್ ಇವತ್ತಿನಿಂದಲ್ಲ, 6 ತಿಂಗಳು ಹಿಂದಿನದ್ದು. ಸರ್ಕಾರ ರಚನೆಯಾದಾಗಿನಿಂದಲೂ ಇಂತಹ ಆಮಿಷಗಳು ಬರುತ್ತಿವೆ. ದುಡ್ಡು ಕೊಡುತ್ತೇವೆ, ಸಚಿವ ಸ್ಥಾನ ನೀಡುತ್ತೇವೆ ಅಲ್ಲಿಗೆ ಬನ್ನಿ, ಇಲ್ಲಿಗೆ ಬನ್ನಿ ಎಂದು ಆಹ್ವಾನ ನೀಡಲಾಗುತ್ತಿದೆ. ಆದರೆ, ನಾವು ಯಾರೂ ಹೋಗುವುದಿಲ್ಲ’ ಎಂದರು.</p>.<p><strong>ಆಕಾಂಕ್ಷಿಯಲ್ಲ:</strong>ಸರ್ಕಾರ ರಚನೆಯಾಗಿ 6 ತಿಂಗಳು ಆಯ್ತು. ಬಾಕಿ ಉಳಿದಿರುವ ಸಚಿವ ಸ್ಥಾನಗಳನ್ನು ಬೇಗನೇ ಭರ್ತಿ ಮಾಡಿದರೆ ಒಳ್ಳೆಯದು. ಆಡಳಿತ ದೃಷ್ಟಿಯಿಂದಲೂ ಸಹಕಾರಿಯಾಗುತ್ತದೆ. ಇದರ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳಬೇಕು ಎಂದು ತಿಳಿಸಿದರು.</p>.<p>‘ಬೆಳಗಾವಿ ಅಧಿವೇಶನ ಆರಂಭವಾಗುವುದಕ್ಕಿಂತ ಮೊದಲು ಸಚಿವ ಸಂಪುಟ ವಿಸ್ತರಣೆಯಾಗಬಹುದು. ಈ ಸಲ ಸಚಿವ ಸ್ಥಾನಕ್ಕಾಗಿ ನಾನು ಬೇಡಿಕೆ ಮಂಡಿಸಿಲ್ಲ. ಏಕೆಂದರೆ ಒಂದೇ ಮನೆಯಲ್ಲಿ 2 ಸಚಿವ ಸ್ಥಾನ ಸಿಗುವುದಿಲ್ಲ. ಬೆಳಗಾವಿ ಜಿಲ್ಲೆಯ ಬೇರೊಬ್ಬರಿಗೆ ಸಚಿವ ಸ್ಥಾನ ನೀಡಬಹುದು. ಎರಡು ವರ್ಷಗಳ ನಂತರ ಸಚಿವ ಸ್ಥಾನಕ್ಕೆ ಬೇಡಿಕೆ ಮಂಡಿಸುತ್ತೇನೆ’ ಎಂದು ಹೇಳಿದರು.</p>.<p><strong>ಸಚಿವರಿಗಿಂತ ಪ್ರಬಲ:</strong>‘ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಚಿವ ಸ್ಥಾನದ ಅವಶ್ಯಕತೆ ಇಲ್ಲ. ನಾನು ಶಾಸಕನಾಗಿಯೇ ಕೆಲಸ ಮಾಡುತ್ತಿದ್ದೇನೆ. ಕೆಲವು ಸಚಿವರಿಗಿಂತಲೂ ಪ್ರಬಲವಾಗಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: ‘</strong>ತಮ್ಮ ಕಡೆ ಬರುವಂತೆ ಕಳೆದ ಆರು ತಿಂಗಳಿನಿಂದಲೂ ಬಿಜೆಪಿಯವರು ಆಮಿಷವೊಡ್ಡುತ್ತಿದ್ದಾರೆ. ಕಾಂಗ್ರೆಸ್ನಲ್ಲಿ ಅಸಮಾಧಾನವಿರುವ 7–8 ಜನ ಶಾಸಕರು ಹೋದರೂ ಹೋಗಬಹುದು. ಆದರೆ, ನಾನು ಹೋಗುವುದಿಲ್ಲ’ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.</p>.<p>ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಅಸಮಾಧಾನ, ಭಿನ್ನಾಭಿಪ್ರಾಯ ಸಹಜವಾದುದು. ಹಾಗಂತ ಎಲ್ಲರೂ ಪಕ್ಷ ಬಿಟ್ಟು ಹೋಗುತ್ತಾರೆ ಎಂದರ್ಥವಲ್ಲ ಎಂದು ನುಡಿದರು.</p>.<p>ಪಕ್ಷದಲ್ಲಿ ಅಸಮಾಧಾನಗೊಂಡ 7–8 ಜನ ಶಾಸಕರು ಇದ್ದಾರೆ. ಅವರನ್ನು ಸಮಾಧಾನ ಪಡಿಸುವ ಕೆಲಸವನ್ನು ವರಿಷ್ಠರು ಮಾಡಬೇಕು. ಅವರು ಬಿಟ್ಟು ಹೋದರೆ ಸರ್ಕಾರಕ್ಕೇನೂ ತೊಂದರೆಯಾಗಲ್ಲ. ಆದರೆ, 25 ಶಾಸಕರು ಹೋದರೆ ತೊಂದರೆಯಾಗುತ್ತದೆ ಎಂದು ಹೇಳಿದರು.</p>.<p><strong>ಆಡಿಯೊ ಕ್ಲಿಪ್ ಇವತ್ತಿನಿಂದಲ್ಲ:</strong>ಶ್ರೀರಾಮುಲು ಆಪ್ತ ಹಾಗೂ ದುಬೈ ಉದ್ಯಮಿ ಎನ್ನಲಾದ ವ್ಯಕ್ತಿಗಳ ನಡುವೆ ನಡೆದ ಸಂಭಾಷಣೆಯ ಆಡಿಯೊ ಕ್ಲಿಪ್ ಬಹಿರಂಗಗೊಂಡ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ‘ಆಡಿಯೊ ಕ್ಲಿಪ್ ಇವತ್ತಿನಿಂದಲ್ಲ, 6 ತಿಂಗಳು ಹಿಂದಿನದ್ದು. ಸರ್ಕಾರ ರಚನೆಯಾದಾಗಿನಿಂದಲೂ ಇಂತಹ ಆಮಿಷಗಳು ಬರುತ್ತಿವೆ. ದುಡ್ಡು ಕೊಡುತ್ತೇವೆ, ಸಚಿವ ಸ್ಥಾನ ನೀಡುತ್ತೇವೆ ಅಲ್ಲಿಗೆ ಬನ್ನಿ, ಇಲ್ಲಿಗೆ ಬನ್ನಿ ಎಂದು ಆಹ್ವಾನ ನೀಡಲಾಗುತ್ತಿದೆ. ಆದರೆ, ನಾವು ಯಾರೂ ಹೋಗುವುದಿಲ್ಲ’ ಎಂದರು.</p>.<p><strong>ಆಕಾಂಕ್ಷಿಯಲ್ಲ:</strong>ಸರ್ಕಾರ ರಚನೆಯಾಗಿ 6 ತಿಂಗಳು ಆಯ್ತು. ಬಾಕಿ ಉಳಿದಿರುವ ಸಚಿವ ಸ್ಥಾನಗಳನ್ನು ಬೇಗನೇ ಭರ್ತಿ ಮಾಡಿದರೆ ಒಳ್ಳೆಯದು. ಆಡಳಿತ ದೃಷ್ಟಿಯಿಂದಲೂ ಸಹಕಾರಿಯಾಗುತ್ತದೆ. ಇದರ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳಬೇಕು ಎಂದು ತಿಳಿಸಿದರು.</p>.<p>‘ಬೆಳಗಾವಿ ಅಧಿವೇಶನ ಆರಂಭವಾಗುವುದಕ್ಕಿಂತ ಮೊದಲು ಸಚಿವ ಸಂಪುಟ ವಿಸ್ತರಣೆಯಾಗಬಹುದು. ಈ ಸಲ ಸಚಿವ ಸ್ಥಾನಕ್ಕಾಗಿ ನಾನು ಬೇಡಿಕೆ ಮಂಡಿಸಿಲ್ಲ. ಏಕೆಂದರೆ ಒಂದೇ ಮನೆಯಲ್ಲಿ 2 ಸಚಿವ ಸ್ಥಾನ ಸಿಗುವುದಿಲ್ಲ. ಬೆಳಗಾವಿ ಜಿಲ್ಲೆಯ ಬೇರೊಬ್ಬರಿಗೆ ಸಚಿವ ಸ್ಥಾನ ನೀಡಬಹುದು. ಎರಡು ವರ್ಷಗಳ ನಂತರ ಸಚಿವ ಸ್ಥಾನಕ್ಕೆ ಬೇಡಿಕೆ ಮಂಡಿಸುತ್ತೇನೆ’ ಎಂದು ಹೇಳಿದರು.</p>.<p><strong>ಸಚಿವರಿಗಿಂತ ಪ್ರಬಲ:</strong>‘ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಚಿವ ಸ್ಥಾನದ ಅವಶ್ಯಕತೆ ಇಲ್ಲ. ನಾನು ಶಾಸಕನಾಗಿಯೇ ಕೆಲಸ ಮಾಡುತ್ತಿದ್ದೇನೆ. ಕೆಲವು ಸಚಿವರಿಗಿಂತಲೂ ಪ್ರಬಲವಾಗಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>