ಎಸ್ಸೆಸ್ಸೆಲ್ಸಿ ಓದುತ್ತಿದ್ದ ಬಾಲಕ ಅರ್ಧಕ್ಕೆ ನಿಲ್ಲಿಸಿ ಬೆಂಗಳೂರಿಗೆ ತೆರಳಿ ಹೋಟೆಲ್ನಲ್ಲಿ ಕೆಲಸಕ್ಕೆ ಸೇರಿದ್ದ. ಕೆ.ಆರ್.ಪೇಟೆಗೆ ತೆರಳಲು ಪಾಂಡವಪುರಕ್ಕೆ ರೈಲಿನಲ್ಲಿ ಬಂದಿಳಿಯುತ್ತಿದ್ದ ಆತನಿಗೆ ಮಂಗಳಮುಖಿಯರ ಪರಿಚಯವಾಗಿತ್ತು. ಫೆ. 4ರಂದು ಆತ ನಾಪತ್ತೆಯಾಗಿದ್ದ. ಅಕ್ಟೋಬರ್ನಲ್ಲಿ ಕೆ.ಆರ್.ಪೇಟೆಯಲ್ಲಿ ಪತ್ತೆಯಾಗಿದ್ದು, ತೃತೀಯಲಿಂಗಿಯಾಗಿ ಪರಿವರ್ತನೆಯಾಗಿದ್ದ. ಇದಕ್ಕೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಾಲಕನ ಅಜ್ಜಿ ಕೆ.ಆರ್.ಪೇಟೆ ಠಾಣೆಯಲ್ಲಿ ದೂರು ನೀಡಿದ್ದರು.