‘ಸ್ವಾಮೀಜಿ ಪಾದಯಾತ್ರೆ ಹೊರಟ ದಿನದಿಂದಲೇ ಸರ್ಕಾರ ಈ ಬಗ್ಗೆ ಎಚ್ಚರ ವಹಿಸಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ, ಸಮುದಾಯದ ಶಾಸಕರನ್ನು ಕರೆಸಿ ಮಾತನಾಡಿದ್ದಾರೆ. ಅವರ ಪ್ರತಿನಿಧಿಯಾಗಿ ನಾನು ಇಲ್ಲಿಗೆ ಬಂದಿದ್ದೇನೆ. ಕಾನೂನಿನ ಚೌಕಟ್ಟಿನಲ್ಲಿ ಈ ಕೆಲಸ ಮಾಡಬೇಕು. ಹೀಗಾಗಿ, ಮೂರು ತಿಂಗಳು ಕಾಲಾವಕಾಶಬೇಕು’ ಎಂದು ಅವರು ಕೋರಿದರು. ಇದನ್ನು ಒಪ್ಪದ ಸ್ವಾಮೀಜಿ, ‘ಎರಡು ತಿಂಗಳಲ್ಲಿ ಬೇಡಿಕೆ ಈಡೇರಿಸಬೇಕು. ಮೀಸಲಾತಿ ಪ್ರಮಾಣ ಹೆಚ್ಚಳವಾಗದಿದ್ದರೆ ಸಮುದಾಯದ ಎಲ್ಲ ಶಾಸಕರೂ ರಾಜೀನಾಮೆ ನೀಡುತ್ತಾರೆ’ ಎಂದು ಸ್ವಾಮೀಜಿ ಹೇಳಿದರು. ಆಗ ವೇದಿಕೆಯಲ್ಲಿದ್ದ ಸಮುದಾಯದ ಶಾಸಕರು ಕೈ ಮೇಲೆತ್ತುವ ಮೂಲಕ ಬೆಂಬಲ ಸೂಚಿಸಿದರು.