<p><strong>ಬೆಂಗಳೂರು:</strong> ಕಲಬುರ್ಗಿ ಸೇರಿ ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗಿದೆ. ರಾಯಚೂರಿನಲ್ಲಿ ಸಿಡಿಲು ಬಡಿದು ಮಹಿಳೆ ಸತ್ತಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ. ಅಫಜಲಪುರದಲ್ಲಿ ತಾಲ್ಲೂಕಿನಲ್ಲಿ ಚೆಕ್ಪೋಸ್ಟ್ ಶೆಡ್ ಬಿದ್ದು, ಇಬ್ಬರು ಕಾನ್ಸ್ಟೆಬಲ್ಗಳು ಗಾಯಗೊಂಡರು.</p>.<p>ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರ್ಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳ ವಿವಿಧೆಡೆ ಶುಕ್ರವಾರ ಒಂದು ಗಂಟೆಗೂ ಹೆಚ್ಚು ಹೊತ್ತು ಧಾರಾಕಾರ ಮಳೆಯಾಯಿತು.</p>.<p>ಕೊಪ್ಪಳ ಜಿಲ್ಲೆಯ ಲಕಮಾಪುರ ಗ್ರಾಮದಲ್ಲಿ ಭಾರಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ವಿವಿಧೆಡೆ ಪಪ್ಪಾಯ, ದಾಳಿಂಬೆ ಗಿಡಗಳು ನೆಲಕ್ಕುರುಳಿವೆ.</p>.<p><strong>ಮಹಿಳೆ, ಜಾನುವಾರು ಸಾವು:</strong>ರಾಯಚೂರು ಜಿಲ್ಲೆಯ ಕಾಟಗಲ್ ದೊಡ್ಡಿಯಲ್ಲಿ ಗುರುವಾರ ರಾತ್ರಿ ಸಿಡಿಲು ಬಡಿದು ನಾಗಮ್ಮ ಅಮರಪ್ಪ (55) ಮೃತಪಟ್ಟರು. ಯಾದಗಿರಿ ಜಿಲ್ಲೆಯಲ್ಲಿ, ಬೀದರ್ ಜಿಲ್ಲೆಯಲ್ಲಿ ಮೇಕೆ, ಆಕಳು ಸತ್ತಿದೆ.</p>.<p>ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ವಿವಿಧೆಡೆ ಧಾರಾಕಾರವಾಗಿ ಮಳೆ ಸುರಿಯಿತು. ಹಿರಿಯೂರು ತಾಲ್ಲೂಕಿನ ಬೇಟೆಮರದಟ್ಟಿಯಲ್ಲಿ ಹೆಂಚಿನ ಮನೆಯೊಂದು ಬಿರುಗಾಳಿಗೆ ಕುಸಿದುಬಿದ್ದಿದೆ.</p>.<p>ಕಾಪು ತಾಲ್ಲೂಕಿನಲ್ಲಿ ಶುಕ್ರವಾರ ಬೆಳಗಿನ ಜಾವದಲ್ಲಿ ಗಾಳಿ ಸಹಿತ ಸುರಿದ ಮಳೆಗೆ ಅಪಾರ ನಷ್ಟ ಉಂಟಾಗಿದೆ. ಬ್ರಹ್ಮಾವರ, ಮಂಗಳೂರು ನಗರದಲ್ಲೂ ಬೆಳಗಿನ ಜಾವ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ.</p>.<p>ಕೊಡಗು ಜಿಲ್ಲೆಯ ವಿವಿಧೆಡೆ ಶುಕ್ರವಾರ ಗುಡುಗು ಸಹಿತ ಮಳೆಯಾಗಿದೆ. ವಿರಾಜಪೇಟೆ ಬಳಿ ಕೆದಮುಳ್ಳೂರು ಗ್ರಾಮದಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಲಬುರ್ಗಿ ಸೇರಿ ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗಿದೆ. ರಾಯಚೂರಿನಲ್ಲಿ ಸಿಡಿಲು ಬಡಿದು ಮಹಿಳೆ ಸತ್ತಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ. ಅಫಜಲಪುರದಲ್ಲಿ ತಾಲ್ಲೂಕಿನಲ್ಲಿ ಚೆಕ್ಪೋಸ್ಟ್ ಶೆಡ್ ಬಿದ್ದು, ಇಬ್ಬರು ಕಾನ್ಸ್ಟೆಬಲ್ಗಳು ಗಾಯಗೊಂಡರು.</p>.<p>ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರ್ಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳ ವಿವಿಧೆಡೆ ಶುಕ್ರವಾರ ಒಂದು ಗಂಟೆಗೂ ಹೆಚ್ಚು ಹೊತ್ತು ಧಾರಾಕಾರ ಮಳೆಯಾಯಿತು.</p>.<p>ಕೊಪ್ಪಳ ಜಿಲ್ಲೆಯ ಲಕಮಾಪುರ ಗ್ರಾಮದಲ್ಲಿ ಭಾರಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ವಿವಿಧೆಡೆ ಪಪ್ಪಾಯ, ದಾಳಿಂಬೆ ಗಿಡಗಳು ನೆಲಕ್ಕುರುಳಿವೆ.</p>.<p><strong>ಮಹಿಳೆ, ಜಾನುವಾರು ಸಾವು:</strong>ರಾಯಚೂರು ಜಿಲ್ಲೆಯ ಕಾಟಗಲ್ ದೊಡ್ಡಿಯಲ್ಲಿ ಗುರುವಾರ ರಾತ್ರಿ ಸಿಡಿಲು ಬಡಿದು ನಾಗಮ್ಮ ಅಮರಪ್ಪ (55) ಮೃತಪಟ್ಟರು. ಯಾದಗಿರಿ ಜಿಲ್ಲೆಯಲ್ಲಿ, ಬೀದರ್ ಜಿಲ್ಲೆಯಲ್ಲಿ ಮೇಕೆ, ಆಕಳು ಸತ್ತಿದೆ.</p>.<p>ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ವಿವಿಧೆಡೆ ಧಾರಾಕಾರವಾಗಿ ಮಳೆ ಸುರಿಯಿತು. ಹಿರಿಯೂರು ತಾಲ್ಲೂಕಿನ ಬೇಟೆಮರದಟ್ಟಿಯಲ್ಲಿ ಹೆಂಚಿನ ಮನೆಯೊಂದು ಬಿರುಗಾಳಿಗೆ ಕುಸಿದುಬಿದ್ದಿದೆ.</p>.<p>ಕಾಪು ತಾಲ್ಲೂಕಿನಲ್ಲಿ ಶುಕ್ರವಾರ ಬೆಳಗಿನ ಜಾವದಲ್ಲಿ ಗಾಳಿ ಸಹಿತ ಸುರಿದ ಮಳೆಗೆ ಅಪಾರ ನಷ್ಟ ಉಂಟಾಗಿದೆ. ಬ್ರಹ್ಮಾವರ, ಮಂಗಳೂರು ನಗರದಲ್ಲೂ ಬೆಳಗಿನ ಜಾವ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ.</p>.<p>ಕೊಡಗು ಜಿಲ್ಲೆಯ ವಿವಿಧೆಡೆ ಶುಕ್ರವಾರ ಗುಡುಗು ಸಹಿತ ಮಳೆಯಾಗಿದೆ. ವಿರಾಜಪೇಟೆ ಬಳಿ ಕೆದಮುಳ್ಳೂರು ಗ್ರಾಮದಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>