ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ 82 ಸಾವಿರ ಕ್ಷಯ ಪ್ರಕರಣ

ಇಂದಿನಿಂದ ಕ್ಷಯ ರೋಗ ನಿವಾರಣೆ ಅಭಿಯಾನ
Last Updated 14 ಜುಲೈ 2019, 20:15 IST
ಅಕ್ಷರ ಗಾತ್ರ

ಬೆಂಗಳೂರು: ನಿಕ್ಷಯ್ ಪೋರ್ಟಲ್‌ನಲ್ಲಿರುವ ಅಂಕಿಅಂಶಗಳ ಪ್ರಕಾರ ಕಳೆದ ವರ್ಷ ರಾಜ್ಯದಲ್ಲಿ 82,550 ಮಂದಿ ಕ್ಷಯ ರೋಗದ (ಟಿಬಿ) ಹಿನ್ನೆಲೆಯಲ್ಲಿ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರ 2025ರ ವೇಳೆಗೆ ಕ್ಷಯ ಮುಕ್ತ ಭಾರತ ನಿರ್ಮಾಣದ ಗುರಿ ಹಾಕಿಕೊಂಡಿದೆ. ಈ ನಿಟ್ಟಿನಲ್ಲಿ ಜುಲೈ15ರಿಂದ 27ರವರೆಗೆ ರೋಗ ಪತ್ತೆ ಮತ್ತು ಚಿಕಿತ್ಸಾ ಅಭಿಯಾನವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿದೆ.

2017ರ ಜನವರಿಯಿಂದ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸಾ ಅಭಿಯಾನವನ್ನು ನಿಯಮಿತವಾಗಿ ನಡೆಸಲಾಗುತ್ತಿದ್ದು, ಇದೀಗ 6ನೇ ಹಂತದಲ್ಲಿ ರಾಜ್ಯದ 30 ಜಿಲ್ಲೆಗಳಿಂದ 1.14 ಕೋಟಿ ಜನರನ್ನು ತಲುಪುವ ಗುರಿಯನ್ನು ಹಾಕಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT