ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂಜನಗೂಡಿನಲ್ಲಿ ಕಟ್ಟೆಚ್ಚರ: ಮನೆಯಲ್ಲೇ ಇರಲು 950 ಮಂದಿಗೆ ಸೂಚನೆ

Last Updated 29 ಮಾರ್ಚ್ 2020, 6:00 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನಲ್ಲಿ ಭಾನುವಾರ ಕಟ್ಟೆಚ್ಚರ ವಹಿಸಲಾಗಿದೆ.

ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಪಟ್ಟಣ ಸಂಪರ್ಕಿಸುವ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಒಂದೇ ದಿನ 5 ಕೊರೊನಾ ಸೋಂಕು ಪತ್ತೆಯಾದ್ದರಿಂದ ಹಾಗೂ 950 ಮಂದಿಯನ್ನು ಮನೆಯಲ್ಲಿಯೆ ನಿಗಾ ವಹಿಸಲು ಹೇಳಿರುವುದರಿಂದ ಇಡೀ‌ ಪಟ್ಟಣ ಸ್ತಬ್ದಗೊಂಡಿದೆ. ಅಗತ್ಯ ಸಾಮಗ್ರಿ ಖರೀದಿಸಲು ಜನರು ಹಿಂದೇಟು ಹಾಕುತ್ತಿದ್ದಾರೆ. ಗಾಳಿಸುದ್ದಿಗಳು ವ್ಯಾಪಕವಾಗಿ ಹಬ್ಬುತ್ತಿವೆ. ಸೋಂಕಿತರು ಪತ್ತೆಯಾದ ಕಾರ್ಖಾನೆಯ ಮೂವರು ಕಾರ್ಮಿಕರಲ್ಲಿ ಜ್ವರ ಕಂಡು ಬಂದಿದ್ದು ಅವರನ್ನು ರಾತ್ರೋ ರಾತ್ರಿ ಮೈಸೂರಿಗೆ ಕರೆದುಕೊಂಡು ಹೋಗಲಾಗಿದೆ ಎಂಬ ಸುದ್ದಿ ಹರಡಿ ಜನರು ಇನ್ನಷ್ಟು ತಳಮಳಗೊಂಡಿದ್ದಾರೆ. ಕೆಲವೆಡೆ ಹಾಲಿನ ಅಂಗಡಿಗಳನ್ನು ತೆರೆಯಲೂ ವರ್ತಕರು ಹಿಂದೇಟು ಹಾಕಿದ್ದಾರೆ. ತಹಶೀಲ್ದಾರ್ ಅವರು ಸಭೆ ಕರೆದಿದ್ದು,ಇನ್ನಷ್ಟು ಬಿಗಿಕ್ರಮಗಳನ್ನು ಜಾರಿಗೊಳಿಸುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT