‘ಪತಿ ಮೂರು ವರ್ಷಗಳಿಂದ ಬೆಳಗಾವಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಮದ್ಯ ಸೇವಿಸುವ ಚಟವಿತ್ತು. ಮನೆಯವರು ಹಾಗೂ ಸಲೂನ್ ಮಾಲೀಕರು ಎಷ್ಟೇ ಬುದ್ಧಿವಾದ ಹೇಳಿದರೂ ಕೇಳಿರಲಿಲ್ಲ. ಲಾಕ್ಡೌನ್ ಆದಾಗಿನಿಂದ ಅಂಗಡಿಯೂ ಬಂದ್ ಆಗಿತ್ತು. ಮದ್ಯ ಸಿಗಲಿಲ್ಲವೆಂದರೆ ಬದುಕಲಾಗುವುದಿಲ್ಲ ಎಂದು ಅಳುತ್ತಾ ಫೋನ್ ಕರೆ ಕಟ್ ಮಾಡಿದ್ದರು’ ಎಂದು ಪತ್ನಿ ಹೇಮಾವತಿ ಟಿಳಕವಾಡಿ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.