ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯ ಸಿಗದಿದ್ದಕ್ಕೆ ವ್ಯಕ್ತಿ ಆತ್ಮಹತ್ಯೆ

Last Updated 2 ಏಪ್ರಿಲ್ 2020, 11:53 IST
ಅಕ್ಷರ ಗಾತ್ರ

ಬೆಳಗಾವಿ: ಮದ್ಯ ಸಿಗಲಿಲ್ಲ ಎಂಬ ಕಾರಣಕ್ಕೆ ಇಲ್ಲಿನ ಅನಗೋಳದ ಬೆಂಡಿಗೇರಿ ಚಾಳದಲ್ಲಿ ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೇವೇಂದ್ರಪ್ಪ ಹಡಪದ (42) ಮೃತ. ಮೂಲತಃ ಸವದತ್ತಿಯ ಅವರು ಸಲೂನ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇಲ್ಲಿ ಬಾಡಿಗೆ ಮನೆಯಲ್ಲಿದ್ದರು.

‘ಪತಿ ಮೂರು ವರ್ಷಗಳಿಂದ ಬೆಳಗಾವಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಮದ್ಯ ಸೇವಿಸುವ ಚಟವಿತ್ತು. ಮನೆಯವರು ಹಾಗೂ ಸಲೂನ್ ಮಾಲೀಕರು ಎಷ್ಟೇ ಬುದ್ಧಿವಾದ ಹೇಳಿದರೂ ಕೇಳಿರಲಿಲ್ಲ. ಲಾಕ್‌ಡೌನ್‌ ಆದಾಗಿನಿಂದ ಅಂಗಡಿಯೂ ಬಂದ್ ಆಗಿತ್ತು. ಮದ್ಯ ಸಿಗಲಿಲ್ಲವೆಂದರೆ ಬದುಕಲಾಗುವುದಿಲ್ಲ ಎಂದು ಅಳುತ್ತಾ ಫೋನ್ ಕರೆ ಕಟ್ ಮಾಡಿದ್ದರು’ ಎಂದು ಪತ್ನಿ ಹೇಮಾವತಿ ಟಿಳಕವಾಡಿ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT