ನಾಗರಹೊಳೆ ಅರಣ್ಯದಿಂದ ಕಾಫಿ ತೋಟದತ್ತ ಬರುವ ಹುಲಿಗಳು ಮೂರು ತಿಂಗಳಿನಿಂದ 30ಕ್ಕೂ ಹೆಚ್ಚಿನ ಜಾನುವಾರುಗಳನ್ನು ಬಲಿ ತೆಗೆದುಕೊಂಡಿವೆ. ಕಾನೂರು, ನಾಲ್ಕೇರಿ, ಬಿರುನಾಣಿ, ಟಿ. ಶೆಟ್ಟಿಗೇರಿ, ಶ್ರೀಮಂಗಲ ಭಾಗಗಳಲ್ಲಿ ಹುಲಿ ದಾಳಿ ಅತಿಯಾಗಿದ್ದು ಅರಣ್ಯ ಇಲಾಖೆ ಸಿಬ್ಬಂದಿಗಳು ಹುಲಿ ಸೆರೆಗೆ ಬೋನಿಟ್ಟು ಹಗಲು ರಾತ್ರಿ ಕಾಯುತ್ತಿವೆ. ಆದರೆ, ಹುಲಿ ಮಾತ್ರ ಬೋನಿಗೆ ಬೀಳುತ್ತಿಲ್ಲ. ಇದೀಗ ಸರೆಯಾಗಿರುವ ಹುಲಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು ಎಂಬುದರ ಬಗ್ಗೆ ಮಾಹಿತಿಯಿಲ್ಲ ಎಂದು ಅರಣ್ಯಾಧಿಕಾರಿಗಳು ತಿಳಿಸಿದರು.