ಹಳ್ಳಿಗಳ ಕಡೆಗೆ ಅಧಿಕಾರಿಗಳ ನಡಿಗೆ:ತಿಂಗಳಲ್ಲಿ ಒಂದು ದಿನ ಕಂದಾಯ ಇಲಾಖೆಯನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಚಿಂತನೆಯಿದೆ. ಹೆಚ್ಚು ಸಮಸ್ಯೆಗಳು ಇರುವ ಹಳ್ಳಿಗಳನ್ನು ಗುರುತಿಸಿ ಜಿಲ್ಲಾಧಿಕಾರಿ, ಎಸಿ, ತಹಶೀಲ್ದಾರ್ ಪ್ರತ್ಯೇಕವಾಗಿ ಹಳ್ಳಿಗಳಿಗೆ ತೆರಳಬೇಕು. ಅಲ್ಲಿ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ಉಳಿದು ಜನರ ಅಹವಾಲು ಆಲಿಸಿ, ಸ್ಥಳದಲ್ಲಿಯೇ ಪರಿಹರಿಸಬೇಕು. ಈ ಕಾರ್ಯಕ್ರಮ ಕೂಡ ರಾಜ್ಯದಾದ್ಯಂತ ಅನುಷ್ಠಾನಕ್ಕೆ ಬರಲಿದೆ ಎಂದರು.