‘ನೂತನ ಸಂಸದೆ ಸುಮಲತಾ ಅವರಿಗೆ ಅಭಿನಂದನೆಗಳು. ನನ್ನ ಸೋಲಿಗೆ ನಾನೇ ಹೊಣೆ. ಯಾವುದೇ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಹೊಣೆಯಲ್ಲ. ಮಂಡ್ಯ ಜನತೆ ತಿರಸ್ಕರಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಂಡ್ಯ ಜನರ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತೇನೆ. ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ಜನರ ಕಷ್ಟ-ಸುಖ ಅರಿಯುವ ಪ್ರಯತ್ನ ಮಾಡುತ್ತೇನೆ’ ಎಂದು ತಿಳಿಸಿದ್ದಾರೆ.