ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನನ್ನ ಸೋಲಿಗೆ ನಾನೇ ಕಾರಣ’: ಅಭಿಷೇಕ್‌ಗೆ ಶುಭ ಕೋರಿದ ನಿಖಿಲ್‌

Last Updated 30 ಮೇ 2019, 20:21 IST
ಅಕ್ಷರ ಗಾತ್ರ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ‘ನನ್ನ ಸೋಲಿಗೆ ನಾನೇ ಕಾರಣ’ ಎಂದು ಪರಾಜಿತ ಅಭ್ಯರ್ಥಿ, ಮೈತ್ರಿ ಪಕ್ಷದ ಕೆ.ನಿಖಿಲ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಸೋಲಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಪೋಸ್ಟ್‌ಗಳಿಗೆ ಕಡಿವಾಣ ಹಾಕಲು ಸ್ವತಃ ನಿಖಿಲ್ ಇನ್‌ಸ್ಟಾಗ್ರಾಂನಲ್ಲಿ ಪ್ರತಿಕ್ರಿಯಿಸಿದ್ದಾರೆ.

‘ನೂತನ ಸಂಸದೆ ಸುಮಲತಾ ಅವರಿಗೆ ಅಭಿನಂದನೆಗಳು. ನನ್ನ ಸೋಲಿಗೆ ನಾನೇ ಹೊಣೆ. ಯಾವುದೇ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಹೊಣೆಯಲ್ಲ. ಮಂಡ್ಯ ಜನತೆ ತಿರಸ್ಕರಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಂಡ್ಯ ಜನರ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತೇನೆ. ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ಜನರ ಕಷ್ಟ-ಸುಖ ಅರಿಯುವ ಪ್ರಯತ್ನ ಮಾಡುತ್ತೇನೆ’ ಎಂದು ತಿಳಿಸಿದ್ದಾರೆ.

‘ನನ್ನ ಸಹೋದರ ಅಭಿಷೇಕ್ ನಟನೆಯ ಅಮರ್ ಚಿತ್ರಕ್ಕೆ ಯಶಸ್ಸು ಸಿಗಲಿ’ ಎಂದು ಶುಭ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT