<p><strong>ಚಾಮರಾಜನಗರ: </strong>‘ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯನ್ನು ಕೊರೊನಾ ವೈರಸ್ ಭೀತಿ ಕಾರಣಕ್ಕೆ ಮುಂದೂಡಬೇಕೇ ಅಥವಾ ನಿಗದಿಯಂತೆ ನಡೆಸಬೇಕೇ ಎಂಬ ಬಗ್ಗೆ ಸೋಮವಾರ (ಮಾರ್ಚ್ 23) ನಿರ್ಧರಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶನಿವಾರ ಇಲ್ಲಿ ಹೇಳಿದರು.</p>.<p>‘ಇದೇ 27ರಿಂದ ಪರೀಕ್ಷೆ ನಿಗದಿ ಯಾಗಿದೆ. ಇನ್ನೂ ಐದಾರು ದಿನಗಳ ಕಾಲಾವಕಾಶ ಇದೆ. ಸೋಮವಾರ ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಎಸ್.ಸುಧಾಕರ್ ಜೊತೆ ಚರ್ಚೆ ನಡೆಸಿ ಪರಿಸ್ಥಿತಿ ಅವಲೋಕಿಸ ಲಾಗುವುದು. ಪರೀಕ್ಷೆ ನಡೆಸುವುದಾದರೆ, ಕೈಗೊಳ್ಳಬೇಕಾದ ಕ್ರಮಗಳ<br />ಬಗ್ಗೆಯೂ ಚರ್ಚಿಸಲಾಗುವುದು. ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿರಿಸಿಕೊಂಡು ಶಿಕ್ಷಣ ಇಲಾಖೆಯು ತೀರ್ಮಾನ ಕೈಗೊಳ್ಳಲಿದೆ’ ಎಂದು ಹೇಳಿದರು.</p>.<p>ನಿಗದಿಯಂತೆ ಪರೀಕ್ಷೆ ನಡೆಯಲಿದೆ ಎಂಬ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ‘ಇನ್ನೂ ಸಮಯ ಇರುವುದರಿಂದ ಆ ರೀತಿ ಹೇಳಿರಬಹುದು. ಸೋಮವಾರ ಅವರ ಜೊತೆಗೂ ಚರ್ಚೆ ಮಾಡುತ್ತೇವೆ’ ಎಂದರು.</p>.<p>‘ಪರೀಕ್ಷೆಯ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ವಿದ್ಯಾರ್ಥಿ ಗಳೂ ಗೊಂದಲಕ್ಕೆ ಒಳಗಾಗಬೇಕಿಲ್ಲ’ ಎಂದು ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>‘ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯನ್ನು ಕೊರೊನಾ ವೈರಸ್ ಭೀತಿ ಕಾರಣಕ್ಕೆ ಮುಂದೂಡಬೇಕೇ ಅಥವಾ ನಿಗದಿಯಂತೆ ನಡೆಸಬೇಕೇ ಎಂಬ ಬಗ್ಗೆ ಸೋಮವಾರ (ಮಾರ್ಚ್ 23) ನಿರ್ಧರಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶನಿವಾರ ಇಲ್ಲಿ ಹೇಳಿದರು.</p>.<p>‘ಇದೇ 27ರಿಂದ ಪರೀಕ್ಷೆ ನಿಗದಿ ಯಾಗಿದೆ. ಇನ್ನೂ ಐದಾರು ದಿನಗಳ ಕಾಲಾವಕಾಶ ಇದೆ. ಸೋಮವಾರ ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಎಸ್.ಸುಧಾಕರ್ ಜೊತೆ ಚರ್ಚೆ ನಡೆಸಿ ಪರಿಸ್ಥಿತಿ ಅವಲೋಕಿಸ ಲಾಗುವುದು. ಪರೀಕ್ಷೆ ನಡೆಸುವುದಾದರೆ, ಕೈಗೊಳ್ಳಬೇಕಾದ ಕ್ರಮಗಳ<br />ಬಗ್ಗೆಯೂ ಚರ್ಚಿಸಲಾಗುವುದು. ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿರಿಸಿಕೊಂಡು ಶಿಕ್ಷಣ ಇಲಾಖೆಯು ತೀರ್ಮಾನ ಕೈಗೊಳ್ಳಲಿದೆ’ ಎಂದು ಹೇಳಿದರು.</p>.<p>ನಿಗದಿಯಂತೆ ಪರೀಕ್ಷೆ ನಡೆಯಲಿದೆ ಎಂಬ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ‘ಇನ್ನೂ ಸಮಯ ಇರುವುದರಿಂದ ಆ ರೀತಿ ಹೇಳಿರಬಹುದು. ಸೋಮವಾರ ಅವರ ಜೊತೆಗೂ ಚರ್ಚೆ ಮಾಡುತ್ತೇವೆ’ ಎಂದರು.</p>.<p>‘ಪರೀಕ್ಷೆಯ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ವಿದ್ಯಾರ್ಥಿ ಗಳೂ ಗೊಂದಲಕ್ಕೆ ಒಳಗಾಗಬೇಕಿಲ್ಲ’ ಎಂದು ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>