ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಸಚಿವ, ‘ಈ ಹಿಂದೆ ಅಧ್ಯಕ್ಷರನ್ನು ಮಾತ್ರ ನೇಮಿಸಿ, ನಂತರ ಸದಸ್ಯರನ್ನು ನೇಮಿಸಿದ ಉದಾಹರಣೆಗಳಿವೆ. ನಾವು ಹೀಗೆ ಮಾಡಿಲ್ಲ.ಜಿಲ್ಲಾವಾರು ಪ್ರಾತಿನಿಧ್ಯ ನೀಡಲು ಸದಸ್ಯರ ನೇಮಕಾತಿಯನ್ನು ಪೂರ್ಣಗೊಳಿಸಿಲ್ಲ. ಯಾವ ಜಿಲ್ಲೆಗೆ ಆದ್ಯತೆ ಸಿಕ್ಕಿಲ್ಲ ಎಂದು ಪರಿಶೀಲಿಸಿ, ಉಳಿದ ಸದಸ್ಯರನ್ನು ನೇಮಿಸುತ್ತೇವೆ’ ಎಂದು ತಿಳಿಸಿದರು.