ಬೆಳಿಗ್ಗೆಯೇ ವಿವಿಧ ತಂಡಗಳಲ್ಲಿ ಧಾವಿಸಿದ ಎಸಿಬಿ ಅಧಿಕಾರಿಗಳು, ಸ್ಥಳೀಯ ಪೊಲೀಸರ ನೆರವು ಪಡೆದು ಕೃಷ್ಣಲಾಲ್ ಅವರ ಸಂಜಯನಗರದ ಮನೆ, ಇವರು ಹಿಂದೆ ಕೆಲಸ ಮಾಡುತ್ತಿದ್ದ ಬಿಬಿಎಂಪಿಯ ಮಹಾದೇವಪುರ ವಲಯ ಕಚೇರಿ, ಬಿಡಿಎ ಎಇಇ ಕಚೇರಿ, ಈ ಅಧಿಕಾರಿಗೆ ಆಪ್ತರಾದ ಭುವನೇಶ್ವರಿ ನಗರದ ಟೆಲಿಕಾಂ ಬಡಾವಣೆಯಲ್ಲಿರುವ ದೀಪಕ್ ಕುಮಾರ್ ಮನೆ, ಅಮಿತ್ ರಿಕಬ್ಚಂದ್ ಜೈನ್ ಅವರ ಗಾಂಧಿನಗರದಲ್ಲಿರುವ ಮನೆ, ಚಿಕ್ಕಪೇಟೆಯಲ್ಲಿರುವ ಕಚೇರಿಗಳನ್ನು ಶೋಧಿಸಲಾಗಿದೆ.