ಕೈಗಾರಿಕಾ ಪ್ರದೇಶಕ್ಕಾಗಿ ಜಮೀನು ಕಳೆದುಕೊಂಡಿರುವ ರೈತರು ಪರಿಹಾರಕ್ಕೆ ಕೆಎಐಡಿಬಿಗೆ ಸಲ್ಲಿಸಿರುವ ಅರ್ಜಿಗಳು, ಜಮೀನಿಗೆ ಸಂಬಂಧಿಸಿದ ದಾಖಲೆಗಳು, ಪತ್ರ ವ್ಯವಹಾರಗಳು, ಕಂದಾಯ ನಿರೀಕ್ಷಕರ ವರದಿ, ಖಾಲಿ ಚೆಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಕೆಲವು ಆರೋಪಿಗಳು ತಲೆ ಮರೆಸಿಕೊಂಡಿದ್ದು ಅವರ ಪತ್ತೆಗಾಗಿ ವಿಶೇಷ ತನಿಖಾ ತಂಡ ರಚಿಸಲಾಗಿದೆ.