<p><strong>ಬೆಂಗಳೂರು:</strong> ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ಅಮಾನತುಗೊಂಡಿರುವ ಎಸ್. ಮೂರ್ತಿ ಮತ್ತು ಇಬ್ಬರು ಅಧಿಕಾರಿಗಳ ಮನೆಗಳು ಸೇರಿ ಒಟ್ಟು 16 ಕಡೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿ ಕೋಟ್ಯಂತರ ಮೌಲ್ಯದ ಆಸ್ತಿ- ಪಾಸ್ತಿ ಪತ್ತೆ ಹಚ್ಚಿದೆ.</p>.<p>‘ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಈ ದಾಳಿ ನಡೆದಿದೆ. ಶೋಧಕಾರ್ಯದ ಜೊತೆಗೆ ಈ ಅಧಿಕಾರಿಗಳು ಹೊಂದಿರುವ ಆಸ್ತಿ–ಪಾಸ್ತಿಗಳ ಮೂಲದ ಬಗ್ಗೆಯೂ ತನಿಖೆ ಮುಂದುವರಿದಿದೆ’ ಎಂದು ಎಸಿಬಿ ಮೂಲಗಳು ಹೇಳಿವೆ.</p>.<p>ಎಸ್. ಮೂರ್ತಿ ಅವರ ಸದಾಶಿವನಗರದಲ್ಲಿರುವ ಮನೆ, ಜಾಲಹಳ್ಳಿ ಕ್ರಾಸ್ನ ಎಚ್.ಎಂ.ಟಿ ಕಾಲೊನಿಯಲ್ಲಿರುವ ಮನೆ, ಆರ್.ಟಿ. ನಗರದ ಓಂ ಶಕ್ತಿ ಅಪಾರ್ಟ್ಮೆಂಟ್ನಲ್ಲಿರುವ ಎರಡು ಫ್ಲ್ಯಾಟ್, ಕೊಡಗು ಜಿಲ್ಲೆಯ ಕೆ. ನಿಡುಗಣಿ ಗ್ರಾಮದ ಕಾಫಿ ತೋಟದ ಮನೆ ಮೇಲೆ ದಾಳಿ ನಡೆದಿದೆ.</p>.<p>ಬೆಂಗಳೂರು, ಕೊಡಗು ಸೇರಿದಂತೆ, ಅನೇಕ ಕಡೆ ಮೂರ್ತಿ ಆಸ್ತಿ ಸಂಪಾದಿಸಿದ್ದಾರೆ ಎಂಬ ಮಾಹಿತಿ ಸಂಗ್ರಹಿಸಿದ್ದ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ನಗದು, ಚಿನ್ನಾಭರಣ, ಐಷಾರಾಮಿ ವಸ್ತುಗಳು, ಆಸ್ತಿ-ಪಾಸ್ತಿಗಳ ದಾಖಲೆ ಪತ್ರ ವಶಪಡಿಸಿಕೊಂಡಿದ್ದಾರೆ.</p>.<p>‘ಒಂದೂವರೆ ವರ್ಷದ ಹಿಂದೆ ಮೂರ್ತಿ ಕೊಡಗಿನಲ್ಲಿ 12 ಎಕರೆ ಭೂಮಿ ಖರೀದಿಸಿದ್ದಾರೆ. ಅದರಿಂದ ಒಂದು ಕೋಟಿ ಆದಾಯ ಬಂದಿದೆ ಎಂದು ಮೂರ್ತಿ ಹೇಳಿಕೆ ನೀಡಿದ್ದಾರೆ. ಆದರೆ, ಆ ಭೂಮಿ ಕಾಡು ಪ್ರದೇಶವಾಗಿದ್ದು, ಅಲ್ಲಿ ಏನನ್ನೂ ಬೆಳೆದಿಲ್ಲ’ ಎಂದೂ ಮೂಲಗಳು ಹೇಳಿವೆ.</p>.<p>ವಿಧಾನಸಭೆ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಸಂದರ್ಭದಲ್ಲಿ ನಡೆದ ಬೆಳಗಾವಿ ಅಧಿವೇಶನದಲ್ಲಿ ₹10 ಕೋಟಿ ಹಣ ದುರ್ಬಳಕೆ ಮಾಡಿರುವ ಆರೋಪವನ್ನು ಮೂರ್ತಿ ಹೊತ್ತಿದ್ದಾರೆ. ಅಲ್ಲದೆ, ಅದೇ ಅವಧಿಯಲ್ಲಿ ವಿಧಾನಸಭಾ ಸಚಿವಾಲಯಕ್ಕೆ ನಡೆದ ನೇಮಕಾತಿಯಲ್ಲೂ ಅಕ್ರಮ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ಅಮಾನತುಗೊಂಡಿರುವ ಎಸ್. ಮೂರ್ತಿ ಮತ್ತು ಇಬ್ಬರು ಅಧಿಕಾರಿಗಳ ಮನೆಗಳು ಸೇರಿ ಒಟ್ಟು 16 ಕಡೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿ ಕೋಟ್ಯಂತರ ಮೌಲ್ಯದ ಆಸ್ತಿ- ಪಾಸ್ತಿ ಪತ್ತೆ ಹಚ್ಚಿದೆ.</p>.<p>‘ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಈ ದಾಳಿ ನಡೆದಿದೆ. ಶೋಧಕಾರ್ಯದ ಜೊತೆಗೆ ಈ ಅಧಿಕಾರಿಗಳು ಹೊಂದಿರುವ ಆಸ್ತಿ–ಪಾಸ್ತಿಗಳ ಮೂಲದ ಬಗ್ಗೆಯೂ ತನಿಖೆ ಮುಂದುವರಿದಿದೆ’ ಎಂದು ಎಸಿಬಿ ಮೂಲಗಳು ಹೇಳಿವೆ.</p>.<p>ಎಸ್. ಮೂರ್ತಿ ಅವರ ಸದಾಶಿವನಗರದಲ್ಲಿರುವ ಮನೆ, ಜಾಲಹಳ್ಳಿ ಕ್ರಾಸ್ನ ಎಚ್.ಎಂ.ಟಿ ಕಾಲೊನಿಯಲ್ಲಿರುವ ಮನೆ, ಆರ್.ಟಿ. ನಗರದ ಓಂ ಶಕ್ತಿ ಅಪಾರ್ಟ್ಮೆಂಟ್ನಲ್ಲಿರುವ ಎರಡು ಫ್ಲ್ಯಾಟ್, ಕೊಡಗು ಜಿಲ್ಲೆಯ ಕೆ. ನಿಡುಗಣಿ ಗ್ರಾಮದ ಕಾಫಿ ತೋಟದ ಮನೆ ಮೇಲೆ ದಾಳಿ ನಡೆದಿದೆ.</p>.<p>ಬೆಂಗಳೂರು, ಕೊಡಗು ಸೇರಿದಂತೆ, ಅನೇಕ ಕಡೆ ಮೂರ್ತಿ ಆಸ್ತಿ ಸಂಪಾದಿಸಿದ್ದಾರೆ ಎಂಬ ಮಾಹಿತಿ ಸಂಗ್ರಹಿಸಿದ್ದ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ನಗದು, ಚಿನ್ನಾಭರಣ, ಐಷಾರಾಮಿ ವಸ್ತುಗಳು, ಆಸ್ತಿ-ಪಾಸ್ತಿಗಳ ದಾಖಲೆ ಪತ್ರ ವಶಪಡಿಸಿಕೊಂಡಿದ್ದಾರೆ.</p>.<p>‘ಒಂದೂವರೆ ವರ್ಷದ ಹಿಂದೆ ಮೂರ್ತಿ ಕೊಡಗಿನಲ್ಲಿ 12 ಎಕರೆ ಭೂಮಿ ಖರೀದಿಸಿದ್ದಾರೆ. ಅದರಿಂದ ಒಂದು ಕೋಟಿ ಆದಾಯ ಬಂದಿದೆ ಎಂದು ಮೂರ್ತಿ ಹೇಳಿಕೆ ನೀಡಿದ್ದಾರೆ. ಆದರೆ, ಆ ಭೂಮಿ ಕಾಡು ಪ್ರದೇಶವಾಗಿದ್ದು, ಅಲ್ಲಿ ಏನನ್ನೂ ಬೆಳೆದಿಲ್ಲ’ ಎಂದೂ ಮೂಲಗಳು ಹೇಳಿವೆ.</p>.<p>ವಿಧಾನಸಭೆ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಸಂದರ್ಭದಲ್ಲಿ ನಡೆದ ಬೆಳಗಾವಿ ಅಧಿವೇಶನದಲ್ಲಿ ₹10 ಕೋಟಿ ಹಣ ದುರ್ಬಳಕೆ ಮಾಡಿರುವ ಆರೋಪವನ್ನು ಮೂರ್ತಿ ಹೊತ್ತಿದ್ದಾರೆ. ಅಲ್ಲದೆ, ಅದೇ ಅವಧಿಯಲ್ಲಿ ವಿಧಾನಸಭಾ ಸಚಿವಾಲಯಕ್ಕೆ ನಡೆದ ನೇಮಕಾತಿಯಲ್ಲೂ ಅಕ್ರಮ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>