<p><strong>ಬೆಂಗಳೂರು:</strong> ಸ್ವತ್ತೊಂದರ ಖಾತೆ ಬದಲಾವಣೆ ಮಾಡಿಕೊಡಲು ₹ 12 ಸಾವಿರ ಲಂಚ ಪಡೆಯುತ್ತಿದ್ದ ಬಿಬಿಎಂಪಿಯ ಕಂದಾಯ ನಿರೀಕ್ಷಕ ಚಂದ್ರಶೇಖರ್ (40) ಅವರನ್ನು ಶನಿವಾರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ.</p>.<p>ಮಾರತಹಳ್ಳಿ ಸಹಾಯಕ ಕಂದಾಯ ಅಧಿಕಾರಿ ಕಚೇರಿಯಲ್ಲಿ ಕಂದಾಯ ನಿರೀಕ್ಷಕರಾಗಿರುವ ಆರೋಪಿ ಚಂದ್ರಶೇಖರ್ ಬೆಳ್ಳಂದೂರು 150ನೇ ವಾರ್ಡ್ ಆಸ್ತಿ ತೆರಿಗೆ ಮೌಲ್ಯಮಾಪಕರಾಗಿದ್ದಾರೆ. ಅರ್ಜಿದಾರರಿಂದ ಆರೋಪಿ ಲಂಚ ಪಡೆಯುವಾಗ ಎಸಿಬಿ ಡಿವೈಎಸ್ಪಿ ಜಗದೀಶ್ ಬಂಧಿಸಿದ್ದಾರೆ.</p>.<p>ಬಂಧಿತರಿಂದ ಹಣ ವಶಪಡಿಸಿಕೊಳ್ಳಲಾಗಿದೆ. ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸ್ವತ್ತೊಂದರ ಖಾತೆ ಬದಲಾವಣೆ ಮಾಡಿಕೊಡಲು ₹ 12 ಸಾವಿರ ಲಂಚ ಪಡೆಯುತ್ತಿದ್ದ ಬಿಬಿಎಂಪಿಯ ಕಂದಾಯ ನಿರೀಕ್ಷಕ ಚಂದ್ರಶೇಖರ್ (40) ಅವರನ್ನು ಶನಿವಾರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ.</p>.<p>ಮಾರತಹಳ್ಳಿ ಸಹಾಯಕ ಕಂದಾಯ ಅಧಿಕಾರಿ ಕಚೇರಿಯಲ್ಲಿ ಕಂದಾಯ ನಿರೀಕ್ಷಕರಾಗಿರುವ ಆರೋಪಿ ಚಂದ್ರಶೇಖರ್ ಬೆಳ್ಳಂದೂರು 150ನೇ ವಾರ್ಡ್ ಆಸ್ತಿ ತೆರಿಗೆ ಮೌಲ್ಯಮಾಪಕರಾಗಿದ್ದಾರೆ. ಅರ್ಜಿದಾರರಿಂದ ಆರೋಪಿ ಲಂಚ ಪಡೆಯುವಾಗ ಎಸಿಬಿ ಡಿವೈಎಸ್ಪಿ ಜಗದೀಶ್ ಬಂಧಿಸಿದ್ದಾರೆ.</p>.<p>ಬಂಧಿತರಿಂದ ಹಣ ವಶಪಡಿಸಿಕೊಳ್ಳಲಾಗಿದೆ. ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>