ಮಳವಳ್ಳಿ ಕಡೆಯಿಂದ ಭಾರತೀನಗರ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ವಿದ್ಯುತ್ ತಂತಿಗಳು ತುಂಡಾಗಿ ಬಿದ್ದಿವೆ. ಈ ವೇಳೆ ಒಳಗಿದ್ದವರು ಗಂಭೀರವಾಗಿ ಗಾಯಗೊಂಡು ಚೀರಾಡುತ್ತಿರುವುದನ್ನು ಕೇಳಿಸಿಕೊಂಡ ಮೂವರು ಕಾರಿನದ್ದವರ ರಕ್ಷಣೆಗೆ ತೆರಳಿದ್ದಾರೆ.
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೇ ಅದನ್ನು ತುಳಿದು ಮೃತಪಟ್ಟಿದ್ದಾರೆ.