ಶ್ರೀ ಗುರುರಾಜ ಟ್ರಾವೆಲ್ಸ್ ಏಜೆನ್ಸಿಗೆಸೇರಿದ ಬಸ್, ನೀರಜ್ ಅವರಬೈಕ್ಗೆ ಎದುರುಗಡೆಯಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಗೆ ಬೆಂಕಿ ಹೊತ್ತಿಕೊಂಡು ನೀರಜ್ ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ ಬೈಕ್ ಸುಟ್ಟು ಕರಕಲಾಗಿದೆ. ಹಿಂಬದಿ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಂಗಾರಪೇಟೆ ಪೊಲೀಸರು ಬಸ್ಚಾಲಕನನ್ನು ಬಂಧಿಸಿ ವಾಹನ ವಶಕ್ಕೆ ತೆಗೆದುಕೊಂಡಿದ್ದಾರೆ.