ಬೆಂಗಳೂರು: ನಗರದ ಮಾನ್ಯತಾ ಟೆಕ್ ಪಾರ್ಕ್ ಬಳಿ ಭಾನುವಾರ ಅಪಘಾತ ಸಂಭವಿಸಿದ್ದು, ಹೊಸಕೋಟೆ ವಿಭಾಗದ ಡಿವೈಎಸ್ಪಿ ಎನ್.ಬಿ. ಸಕ್ರಿ ಗಾಯಗೊಂಡಿದ್ದಾರೆ.
‘ಸಕ್ರಿ ಅವರು ಹೆಬ್ಬಾಳದಲ್ಲಿರುವ ಮನೆಯಿಂದ ಹೊಸಕೋಟೆಯಲ್ಲಿರುವ ತಮ್ಮ ಕಚೇರಿಗೆ ಪೊಲೀಸ್ ವಾಹನದಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಚಿಕ್ಕಜಾಲ ಸಂಚಾರ ಪೊಲೀಸರು ತಿಳಿಸಿದರು.
‘ಚಾಲಕ ಹಾಗೂ ಸಕ್ರಿ ವಾಹನದಲ್ಲೇ ಸಿಲುಕಿಕೊಂಡಿದ್ದರು. ಅವರಿಬ್ಬರನ್ನು ಸ್ಥಳೀಯರು ವಾಹನದಿಂದ ಹೊರಗೆ ತಂದು ರಕ್ಷಿಸಿದ್ದಾರೆ. ಸಕ್ರಿ ಅವರ ಎಡ ಕೈಗೆ ಗಾಯವಾಗಿದೆ. ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿವೆ’ ಎಂದೂ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.