ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ದಾಟುತ್ತಿದ್ದಾಗ ಲಾರಿಗೆ ಸಿಲುಕಿ ಬಾಲಕ ಸಾವು: ಗ್ರಾಮಸ್ಥರಿಂದ ರಸ್ತೆ ತಡೆ

Last Updated 28 ಅಕ್ಟೋಬರ್ 2018, 4:34 IST
ಅಕ್ಷರ ಗಾತ್ರ

ಮಲೇಬೆನ್ನೂರು: ಸಮೀಪದ ಕೊಮಾರನಹಳ್ಳಿ ಬಳಿ ರಸ್ತೆ ದಾಟುವ ಸಂದರ್ಭದಲ್ಲಿ ಲಾರಿಗೆ ಸಿಲುಕಿ ಬಾಲಕ ಅಜಯ್ (10) ಸ್ಥಳದಲ್ಲೇ ಭಾನುವಾರ ಮೃತಪಟ್ಟಿದ್ದಾನೆ.

ರಾಜ್ಯ ಹೆದ್ದಾರಿ-25ರಲ್ಲಿ ಈ ದುರಂತ ಸಂಭವಿಸಿದ್ದು,ಲಾರಿಯನ್ನು ಸ್ಥಳದಲ್ಲೇ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ತಡೆ ನಡೆಸಿದ್ದಾರೆ.ಎರಡು ತಿಂಗಳ ಅವಧಿಯಲ್ಲಿ ಈ ಸ್ಥಳದಲ್ಲಿ ನಡೆದ ನಾಲ್ಕನೇ ಅಪಘಾತ ಇದಾಗಿದೆ.

ರಕ್ಷತಾ ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸ್ಥಳಕೆ ಬರಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.ಸ್ಥಳೀಯ ಪೊಲೀಸರು ಗ್ರಾಮಸ್ಥರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT