‘ಮಲಪ್ರಭಾ ನದಿ ಮೈದುಂಬಿ ಹರಿಯುತ್ತಿರುವುದರಿಂದ ಸೇತುವೆಯ ಮೇಲೆ ವಾಹನ ಹೋಗದಂತೆ ಅವರು ನಿಯಂತ್ರಿಸುತ್ತಿದ್ದರು. ಬೆಳಗಾವಿಯಿಂದ ಧಾರವಾಡ ಕಡೆ ಹೊರಟಿದ್ದ ವಾಹನಗಳನ್ನು ಸರ್ವೀಸ್ ರಸ್ತೆಯ ಮೂಲಕ ಕಳುಹಿಸುತ್ತಿದ್ದರು. ಇದೇ ವೇಳೆ ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದರು’ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದರು.